Connect with us

Dvgsuddi Kannada | online news portal | Kannada news online

ಮಲೇಬೆನ್ನೂರಿನ ಖ್ಯಾತ ವೈದ್ಯ ಅರುಣ್ ಬಿ. ದಾವಣಗೆರೆ ನಿವಾಸದಲ್ಲಿ ಆತ್ಮಹತ್ಯೆ

FB IMG 1654102121043

ದಾವಣಗೆರೆ

ಮಲೇಬೆನ್ನೂರಿನ ಖ್ಯಾತ ವೈದ್ಯ ಅರುಣ್ ಬಿ. ದಾವಣಗೆರೆ ನಿವಾಸದಲ್ಲಿ ಆತ್ಮಹತ್ಯೆ

ದಾವಣಗೆರೆ:ಮಲೇಬೆನ್ನೂರಿನ ಖ್ಯಾತ ವೈದ್ಯ ಡಾ. ಅರುಣ ಬಿ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಲೇಬೆನ್ನೂರು ಖ್ಯಾತ ವೈದ್ಯ ಡಾ. ಬಿ. ಚಂದ್ರಶೇಖರ್ ಮತ್ತು ಜ್ಯೋತಿ ಅವರ ಪುತ್ರ ಡಾ. ಅರುಣ್ ಬೆಣ್ಣಿಹಳ್ಳಿ (37) ಇಂದು ಮಧ್ಯಾಹ್ನ 1 ಗಂಟೆಗೆ ದಾವಣಗೆರೆಯ  ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ. ಅರುಣ ಬಿ ಅವರು ಶಸ್ತ್ರ ಚಿಕಿತ್ಸೆ ತಜ್ಞರಾಗಿದ್ದರು. ಜಿಲ್ಲಾ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ, ಪುತ್ರಿ, ತಂದೆ, ತಾಯಿ ಹಾಗೂ ಒರ್ವ ಸಹೋದರಿಯನ್ನು ಅಗಲಿದ್ದಾರೆ.

ಘಟನ ಸ್ಥಳಕ್ಕೆ ಎಸ್ ಪಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲಿಸಿದರು. ತನಿಖಾಧಿಕಾರಿಗಳಿಗೆ ಸೂಕ್ತ ತನಿಖಾ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪಿಎಸ್ ಐ ಧನಂಜಯ್ ಉಪಸ್ಥಿತರಿದ್ದರು.
ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top