ದಾವಣಗೆರೆ: ನಡು ರಸ್ತೆಯಲ್ಲಿಯೇ ವ್ಯಕ್ತಿಯೊಬ್ಬನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿ ಸರ್ಕಲ್ನಲ್ಲಿ ನಡೆದಿದೆ.
ಸ್ಥಳೀಯರು ಬಿಡಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಮನಬಂದಂತೆ ಚಾಕುವಿನಿಂದ ಹಲ್ಲೆ ಮಾಡಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆ ನಲ್ಲೂರು ಗ್ರಾಮದ ಜಾಕೀರ್ ಮೇಲೆ ಸಲೀಂ ಎಂಬಾತ ಚಾಕುವಿನಿಂದ ದಾಳಿ ನಡೆಸಿದ್ದಾರೆ. ಎಲ್ಲರೂ ನೋಡುತ್ತಿದ್ದಂತೆ ಚಾಕು ದಾಳಿ ನಡೆಸಿದ್ದಾನೆ. ಜಾಕೀರ್ ತೀವ್ರ ಗಾಯದಿಂದ ನೆಲಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಜಾಕೀರ್ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.
ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



