ದಾವಣಗೆರೆ: ಜೆಸಿಬಿ ಟೈರ್ ಗಳಿಗೆ ಗಾಳಿ ತುಂಬಿಸುವಾಗ ಭಾರೀ ಸ್ಫೋಟ; ಯುವಕ ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜೆಸಿಬಿ ಟೈರ್ ಗಳಿಗೆ ಗಾಳಿ ತುಂಬಿಸುವಾಗ ಭಾರೀ ಪ್ರಮಾಣದಲ್ಲಿ ಸ್ಫೋಟಗೊಂಡು ಒಬ್ಬ ಯುವಕ ಸಾವನ್ಬಪ್ಪಿದ ಘಟನೆ ಹರಿಹರ ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಹಲವಾಗಲು ನಿಟ್ಟೂರಿನ ಮಾರುತಿ(26)ಮೃತಪಟ್ಟ‌ ವ್ಯಕ್ತಿ. ಹರಪನಹಳ್ಳಿಯ ದುಗ್ಗಾವತಿಯ ಜೆಸಿಬಿಗಳಿಗೆ ಗಾಳಿ ತುಂಬಿಸಲು ಕುರುಬರಹಳ್ಳಿಗೆ ಟ್ರ್ಯಾಕ್ಟರ್ ನಲ್ಲಿ ಟೈರ್ ಹಾಕಿಕೊಂಡು ಬರಲಾಗಿತ್ತು. ಟ್ರ್ಯಾಕ್ಟರ್ ಟ್ರಾಲಿಯಲ್ಲಿಯೇ ಗಾಳಿ ತುಂಬಿಸುವ ವೇಳೆ ಜೆಸಿಬಿ ಟೈರ್ ಸ್ಫೋಟಗೊಂಡಿದೆ.

ಸ್ಫೋಟದ ರಭಸಕ್ಕೆ‌ ಟ್ರಾಲಿಯಿಂದ‌ ಯುವಕ ನಾಲ್ಕೈದು ಅಡಿ ಎತ್ತರಕ್ಕೆ ಹಾರಿ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನು. ಕೂಡಲೇ ದಾವಣಗೆರೆಯ ಎಸ್ ಎಸ್ ಆಸ್ಪತ್ರೆ ಗೆ ಸಾಗಿಸುವಾಗ‌ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *