Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಲಕ್ಷ ಮೌಲ್ಯದ ಬೆಳ್ಳಿ  ಆಭರಣ ವಶ

ದಾವಣಗೆರೆ

ದಾವಣಗೆರೆ: ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಲಕ್ಷ ಮೌಲ್ಯದ ಬೆಳ್ಳಿ  ಆಭರಣ ವಶ

ದಾವಣಗೆರೆ:  ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 20 ಲಕ್ಷ ಮೌಲ್ಯದ ಬೆಳ್ಳಿ ಕಾಲ್ ಚೈನ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಎಸ್ ಪಿ ಸಿಬಿ ರಿಷ್ಯಂತ್ , ಹೆಚ್ಚುವರಿ ಎಸ್ ಪಿ ರಾಮಗೊಂಡ ಬಿ. ಬಸರಗಿ,  ಡಿವೈಎಸ್ ಪಿ ನರಸಿಂಹ ತಾಮ್ರಧ್ವಜ  ಮಾರ್ಗದರ್ಶನದಲ್ಲಿ ಬಡಾವಣೆ ಪೊಲೀಸ್ ಠಾಣೆಯ ನಿರೀಕ್ಷಕ ಧನಂಜಯ ನೇತೃತ್ವದಲ್ಲಿ ಪಿಎಸ್ ಐ ಅಶ್ವಥಕುಮಾರ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು . ಈ ಪ್ರಕಣದಲ್ಲಿ  ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.  ಈ ಪ್ರಕರಣ ಪತ್ತೆಯಲ್ಲಿ ಯಶಸ್ವಿಯಾದ ಪೊಲೀಸ್ ಸಿಬ್ಬಂದಿಯನ್ನು ಎಸ್ ಪಿ ರಿಷ್ಯಂತ್  ಪ್ರಶಂಸೆ  ವ್ಯಕ್ತಪಡಿಸಿದ್ದಾರೆ.

 

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top