ದಾವಣಗೆರೆ: ಜಗಳ ವಿಕೋಪಕ್ಕೆ ತಿರುಗಿ ಜನ್ಮ ನೀಡಿದ ತಂದೆಯನ್ನೇ ಮಗನೊಬ್ಬ ಕೊಲೆ ಮಾಡಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದ ಬಳಿಯ ಎಸ್.ಆರ್.ಕ್ಯಾಂಪ್ನಲ್ಲಿ ನಿನ್ನೆ ರಾತ್ರಿ ನಡೆದಿದೆ.
ಎಸ್.ಆರ್. ಕ್ಯಾಂಪ್ನ ಮಂಜುನಾಥ (60) ಕೊಲೆಯಾದ ವ್ಯಕ್ತಿಯಾಗಿದ್ದು, ತಿಪ್ಪೇಶ್ (23) ಕೊಲೆ ಮಾಡಿದ ಮಗನಾಗಿದ್ದಾನೆ. ಮನೆಯ ವಿಚಾರದಲ್ಲಿ ತಂದೆ-ಮಗನ ನಡುವೆ ವಾಗ್ವಾದ ಉಂಟಾಗಿ ಗಲಾಟೆ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ತಿಪ್ಪೇಶ್ ತನ್ನ ತಂದೆಯನ್ನೇ ಕೊಲೆಗೈದು ಪರಾರಿಯಾಗಿದ್ದಾನೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವಾಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ.



