Connect with us

Dvgsuddi Kannada | online news portal | Kannada news online

ದಾವಣಗೆರೆ: ಜಗಳ ವಿಕೋಪಕ್ಕೆ ತಿರುಗಿ ತಂದೆಯನ್ನೇ ಕೊಲೆಗೈದು ಮಗ‌ ಪರಾರಿ

ಚನ್ನಗಿರಿ

ದಾವಣಗೆರೆ: ಜಗಳ ವಿಕೋಪಕ್ಕೆ ತಿರುಗಿ ತಂದೆಯನ್ನೇ ಕೊಲೆಗೈದು ಮಗ‌ ಪರಾರಿ

ದಾವಣಗೆರೆ: ಜಗಳ ವಿಕೋಪಕ್ಕೆ ತಿರುಗಿ ಜನ್ಮ ನೀಡಿದ ತಂದೆಯನ್ನೇ ಮಗನೊಬ್ಬ ಕೊಲೆ ಮಾಡಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದ ಬಳಿಯ ಎಸ್‌.ಆರ್‌.ಕ್ಯಾಂಪ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ.

ಎಸ್‌.ಆರ್‌. ಕ್ಯಾಂಪ್‌ನ ಮಂಜುನಾಥ (60) ಕೊಲೆಯಾದ ವ್ಯಕ್ತಿಯಾಗಿದ್ದು, ತಿಪ್ಪೇಶ್‌ (23) ಕೊಲೆ ಮಾಡಿದ ಮಗನಾಗಿದ್ದಾನೆ. ಮನೆಯ ವಿಚಾರದಲ್ಲಿ ತಂದೆ-ಮಗನ ನಡುವೆ ವಾಗ್ವಾದ ಉಂಟಾಗಿ ಗಲಾಟೆ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ತಿಪ್ಪೇಶ್ ತನ್ನ ತಂದೆಯನ್ನೇ ಕೊಲೆಗೈದು ಪರಾರಿಯಾಗಿದ್ದಾನೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವಾಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

Advertisement

ದಾವಣಗೆರೆ

Advertisement
To Top