ದಾವಣಗೆರೆ: ಅಕ್ರಮ ಜಾನುವಾರು ಸಾಗಾಣಿಕೆ ಮೇಲೆ ಪೊಲೀಸ್ ದಾಳಿ; 6 ಜನ ಆರೋಪಿ, 14.23 ಲಕ್ಷದ ಸ್ವತ್ತು ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಹೊರ ವಲಯದಲ್ಲಿ 5 ವಾಹನಗಳಲ್ಲಿ ಅಕ್ರಮವಾಗಿ ಜಾನುವಾರು ಸಾಗಾಣಿಕೆ ಮೇಲೆ ಪೊಲೀಸರ ದಾಳಿ ಮಾಡಿ, 19 ಜಾನುವಾರು ಸಹಿತ 6 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಸಂತೇಬೆನ್ನೂರಿನ ಚೌಡೇಶ್ವರಿ ದೇವಸ್ಥಾನದ ಸಾಸಲು ರಸ್ತೆ ಬಳಿ 5 ವಾಹನಗಳಲ್ಲಿ ಅಕ್ರಮವಾಗಿ 19 ಜಾನುವಾರು ಸಾಗಾಟದ ಮಾಹಿತಿ ಮೇರೆ ಪೊಲೀಸರು ದಾಳಿ ಮಾಡಿದ್ದಾರೆ. ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡಲಾಗುತ್ತಿತ್ತು. 15 ಎಮ್ಮೆ, 3 ಹಸು ಕರು ಹಾಗೂ 1 ಹಸುವನ್ನು ವಶಕ್ಕೆ ಪಡೆದು, 6 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 14.23 ಲಕ್ಷ ಮೌಲ್ಯದ 5 ವಾಹನ ಹಾಗೂ ಜಾನುವಾರು ವಶಕ್ಕೆ ಪಡೆಯಲಾಗಿದೆ. ಈ ಸಬಂಧ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿವೈಎಸ್ ಪಿ ಸಂತೋಷ್ ಮಾರ್ಗದರ್ಶನದಲ್ಲಿ , ಸಿಪಿಐ ಮಹೇಶ್ ನೇತೃತ್ವದಲ್ಲಿ ಪಿಎಸ್ ಐ ಶಿವರುದ್ರಪ್ಪ‌ ಎಸ್. ಮೇಟಿ ಅವರನ್ನೊಳಗೊಂಡ ತಂಡ ದಾಳಿ ಮಾಡಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *