Connect with us

Dvgsuddi Kannada | online news portal | Kannada news online

ದಾವಣಗೆರೆ: ಶಾಲಾ ಮಟ್ಟದ ಕ್ರೀಡಾ ಕೂಟದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ; ಇಬ್ಬರು ಯುವಕರಿಗೆ ಚಾಕು ಇರಿತ

ಚನ್ನಗಿರಿ

ದಾವಣಗೆರೆ: ಶಾಲಾ ಮಟ್ಟದ ಕ್ರೀಡಾ ಕೂಟದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ; ಇಬ್ಬರು ಯುವಕರಿಗೆ ಚಾಕು ಇರಿತ

ದಾವಣಗೆರೆ: ಶಾಲಾ ಮಟ್ಟದ ಕ್ರೀಡಾ ಕೂಟದಲ್ಲಿ 2 ಗುಂಪುಗಳ ನಡುವೆ ಘರ್ಷಣೆ ನಡೆದು ಇಬ್ಬರು ಯುವಕರಿಗೆ ಚಾಕು ಇರಿದಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕರೆಕಟ್ಟೆ ಗ್ರಾಮದಲ್ಲಿ ನಡೆದಿದೆ.

ಚನ್ನಗಿರಿ ತಾಲ್ಲೂಕಿನ ಕರೆಕಟ್ಟೆ ಗ್ರಾಮದಲ್ಲಿ ಶಾಲಾ ಮಟ್ಟದ ಕ್ರೀಡಾ ಕೂಟ ನಡೆಯುತ್ತಿದ್ದ ವೇಳೆ ಯುವತಿಯರಿಗೆ ಚುಡಾಯಿಸಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಚಿರಡೋಣಿ ಗ್ರಾಮದ ದೇವೇಂದ್ರ ಹಾಗೂ ಸುನೀಲ್ ಎಂಬುವರಿಗೆ ಚಾಕು ಇರಿಯಲಾಗಿದೆ.

ಗಾಯಳುಗಳನ್ನು ಚನ್ನಗಿರಿ ತಾಲ್ಲೂಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ರಾಘವೇಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂತೆಬೇನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

Advertisement

ದಾವಣಗೆರೆ

Advertisement
To Top