Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಲ್ವರು ಅಂತರ ಜಿಲ್ಲಾ ಕಳ್ಳರ ಬಂಧನ; 4.87 ಲಕ್ಷ ಮೌಲ್ಯದ ಸ್ವತ್ತು ವಶ

ದಾವಣಗೆರೆ

ದಾವಣಗೆರೆ: ನಾಲ್ವರು ಅಂತರ ಜಿಲ್ಲಾ ಕಳ್ಳರ ಬಂಧನ; 4.87 ಲಕ್ಷ ಮೌಲ್ಯದ ಸ್ವತ್ತು ವಶ

ದಾವಣಗೆರೆ: ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಅಂತರ ಜಿಲ್ಲಾ ಕಳ್ಳರ ಬಂಧಿಸಲಾಗಿದೆ. ಆರೋಪಿಗಳಿಂದ 4.87 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದೆ.

ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯ 6ನೇ ಕಲ್ಲು, ತುರ್ಚಘಟ್ಟ ಗ್ರಾಮದಲ್ಲಿ ಮನೆ ಕಳ್ಳತನ ಪ್ರಕರಣಗಳ ದೂರು ದಾಖಲಾಗಿದ್ದವು. ಈ ಪ್ರಕರಣ ಪತ್ತೆಗೆ ದಾವಣಗೆರೆ ಗ್ರಾಮಾಂತರ ಡಿವೈಎಸ್ ಪಿ ಕನಿಕಾ ಸಿಕ್ರಿವಾಲ್ ಅವರ ಮಾರ್ಗದರ್ಶನದಲ್ಲಿ ಮಾಯಕೊಂಡ ವೃತ್ತ ನಿರೀಕ್ಷಕ ತಿಮ್ಮಣ್ಣ ನೇತೃತ್ವದಲ್ಲಿ ಹದಡಿ ಪೊಲಿಸ್ ಠಾಣೆ ಪಿಎಸ್ ಸಂಜೀವ್ ಕುಮಾರ್ ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ. ಆರೋಪಿಗಳಾದ ಚಿಕ್ಕಮಗಳೂರು ಜಿಲ್ಲೆಯ ರಮೇಶ್, ಮನು, ರೇಣುಕಾ ಹಾಗೂ ದಾವಣಗೆರೆ ಜಿಲ್ಲೆಯ ಪ್ರಮೋದ್ ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಬಂಗಾರ, ಬೆಳ್ಳಿ, ಕೃತ್ಯಕ್ಕೆ ಬಳಸಿದ ವಾಹನ ಸೇರಿ ಒಟ್ಟು 4.87 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದೆ. ಜಿಲ್ಲಾ ಪೊಲೀಸರ ಕಾರ್ಯಾಚರಣೆಗೆ ಎಸ್ ರಿಷ್ಯಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top