Connect with us

Dvgsuddi Kannada | online news portal | Kannada news online

‌ಮನೆ ಕೆಲಸಕ್ಕೆ ಸೇರಿ 5 ಲಕ್ಷ ನಗದು‌ ಸಹಿತ 15 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ಚನ್ನಗಿರಿ ಮೂಲದ ಮಹಿಳೆ ಬಂಧನ

ಚನ್ನಗಿರಿ

‌ಮನೆ ಕೆಲಸಕ್ಕೆ ಸೇರಿ 5 ಲಕ್ಷ ನಗದು‌ ಸಹಿತ 15 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ಚನ್ನಗಿರಿ ಮೂಲದ ಮಹಿಳೆ ಬಂಧನ

ಬೆಂಗಳೂರು: ಕೇರ್ ಟೇಕರ್ ಕೆಲಸಕ್ಕೆ ಸೇರಿಕೊಂಡ ಮಹಿಳೆ ಮನೆಯಲ್ಲಿದ್ದ ಹಣ, ಆಭರಣಗಳೊಂದಿಗೆ ಪರಾರಿಯಾಗಿದ್ದ ಘಟನೆ ಬೆಂಗಳೂರಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕು ಮೂಲದ ಮಹಿಳೆಯನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆಯಿಂದ 5 ಲಕ್ಷ ರೂ. ನಗದೂ ಸೇರಿದಂತೆ 15 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕು ಗುಳ್ಳೆಹಳ್ಳಿ ಗ್ರಾಮದ ಉಮಾದೇವಿ(43) ಬಂಧಿತ ಮಹಿಳೆ. ಬೆಂಗಳೂರು ಅಪರ್ಣ ಎಂಬುವರ ಮನೆಯಲ್ಲಿ ಅವರ ತಂದೆ ಗಂಗಣ್ಣ ಎಂಬುವರನ್ನು ನೋಡಿಕೊಳ್ಳಲು ಕೇರ್ ಟೇಕರ್ ಕೆಲಸಕ್ಕೆ ಉಮಾದೇವಿಯನ್ನು ನೇಮಕ ಮಾಡಿಕೊಂಡಿದ್ದರು. ಸೆ.21ರಂದು ಉಮಾದೇವಿ ಮನೆಯಲ್ಲಿದ್ದ ನಗದು, ಚಿನ್ನದ ಒಡವೆಗಳನ್ನು ಹಾಗೂ ಬೆಳ್ಳಿ ಸಾಮಾನುಗಳನ್ನು ಕಳವು ಮಾಡಿಕೊಂಡು ಹೋಗಿದ್ದಳು.

ಈ ಬಗ್ಗೆ ಅಪರ್ಣ ಅವರು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆಕೈಗೊಂಡ ಪೊಲೀಸರು ಆರೋಪಿತೆ ಬಗ್ಗೆ ಮಾಹಿತಿ ಕಲೆ ಹಾಕಿ ಆಕೆಯನ್ನು ಪತ್ತೆಹಚ್ಚಿ ಬಂಧಿಸಿ 5 ಲಕ್ಷ ರೂ.ನಗದು, 230 ಗ್ರಾಂ ಚಿನ್ನದ ಒಡವೆಗಳು, 750 ಗ್ರಾಂ ಬೆಳ್ಳಿ ಸಾಮಾನುಗಳನ್ನು ವಶಪಡಿಸಿಕೊಂಡಿದ್ದು, ಒಟ್ಟು ಮೌಲ್ಯ 15 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಲಕ್ಷ್ಮಣ್ ಬಿ ನಿಂಬರಗಿ, ಕೆಂಗೇರಿಗೇಟ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕೋದಂಡರಾಮ್ ಅವರ ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್ ರಾಮಮೂರ್ತಿ ಅವರನ್ನೊಳಗೊಂಡ ಸಿಬ್ಬಂದಿ ತಂಡ ಆರೋಪಿತೆಯನ್ನು ಬಂಧಿಸಿ ಸ್ವತ್ತು ವಶಪಡಿಸಿಕೊಂಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

Advertisement

ದಾವಣಗೆರೆ

Advertisement
To Top