Connect with us

Dvgsuddi Kannada | online news portal | Kannada news online

ದಾವಣಗೆರೆ: ಮನೆಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; 83 ಸಾವಿರ ಮೌಲ್ಯದ ಚಿನ್ನಾಭರಣ ವಶ

crime sym

ದಾವಣಗೆರೆ

ದಾವಣಗೆರೆ: ಮನೆಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; 83 ಸಾವಿರ ಮೌಲ್ಯದ ಚಿನ್ನಾಭರಣ ವಶ

ದಾವಣಗೆರೆ:ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಪೊಲೀಸರು ಬಂಧಿಸಿದ್ದಾರೆ. 83 ಸಾವಿರ ಮೌಲ್ಯದ 22 ಗ್ರಾಂ ಚಿನ್ನ ಮತ್ತು 15 ಗ್ರಾಂ ತೂಕದ ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಚಿತ್ರದುರ್ಗ ಟೌನ್‌ ನ ಆರೋಪಿಗಳಾದ ಜಿತೇಂದ್ರ (36) , 2) ಮಹಾಲಿಂಗಪ್ಪ (48) ಬಂಧಿಸಲಾಗಿದೆ. ಸಂತೆಬೆನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಡಿವೈಎಸ್‌ಪಿ ಸಂತೋಷ್ ಮಾರ್ಗದರ್ಶನದಲ್ಲಿ ಸಂತೆಬೆನ್ನೂರು ವೃತ್ತದ ಮಹೇಶ್‌ ನೇತೃತ್ವದಲ್ಲಿ ಪಿ.ಎಸ್.ಐ ಶಿವರುದ್ರಪ್ಪ.ಎಸ್‌.ಮೇಟಿ, ಪಿಎಸ್‌ಐ ಮಂಜುನಾಥ ಎಸ್ ಕಲ್ಲೇದೇವರ ಹಾಗೂ ಸಿಬ್ಬಂದಿಗಳಾದ ಮೈಲಾರಪ್ಪ, ಎಎಸ್‌ಐ, ಉಮೇಶ ವಿಟ ಮಂಜುನಾಥ, ದೊಡ್ಡೆಶ್, ಕೊಟ್ರೇಶ್, ಆಂಜನೇಯ, ಪ್ರಹ್ಲಾದ್ ಎಸ್ , ಸೋಮಶೇಖರ , ರಾಘವೇಂದ್ರ, ಶಾಂತರಾಜು, ನಾಗರಾಜ್ ಕುಂಬಾರ, ಅಕ್ತರ್ ಎಸ್.ಎಂ. ಅವರನ್ನೊಳಗೊಂಡ ತಂಡ ಆರೋಪಿಗಳನ್ನು ಪತ್ತೆ ಮಾಡಿದೆ.

ಈ ಮೇಲ್ಕಂಡ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರನ್ನು ಎಸ್ ಪಿ ಸಿ.ಬಿ. ರಿಷ್ಯಂತ್ , ಹೆಚ್ಚುವರಿ ಎಸ್‌ ಪಿ ರಾಮಗೊಂಡ ಬಿ ಬಸರಗಿ ಶ್ಲಾಘಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top