ರೇಣುಕಾಚಾರ್ಯ ಸಹೋದರ ಪುತ್ರ ಸಾವು: ಫಿಸಿಕಲ್ ಎವಿಡೆನ್ಸ್ ಸಂಗ್ರಹ; ಎಡಿಜಿಪಿ ಅಲೋಕ್ ಕುಮಾರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಶಾಸಕ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರುಶೇಖರ್ ಸಾವು ಪ್ರಕರಣ ತನಿಖೆ ಹಂತದಲ್ಲಿದೆ. ಬಹಿರಂಗವಾಗಿ ಏನೂ ಹೇಳೋದಿಲ್ಲ. ಮರಣೋತ್ತರ ಪರೀಕ್ಷೆ ವರದಿಯನ್ನು ಆದಷ್ಟು ಬೇಗ ಕೊಡುವಂತೆ ಕೇಳಿದ್ದೇವೆ. ನಾವು ಎವಿಡೆನ್ಸ್ ಸಂಗ್ರಹಿಸುತ್ತಿದ್ದೇವೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಚಂದ್ರಶೇಖರ್​ರ ತಂದೆ ದೂರು ಕೊಟ್ಟಿದ್ದಾರೆ. ದಾವಣಗೆರೆ ಎಸ್ಪಿ ರಿಷ್ಯಂತ್ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ. ಸ್ಥಳಕ್ಕೆ ಹುಬ್ಬಳ್ಳಿ ಮತ್ತು ದಾವಣಗೆರೆಯ ಎಫ್‌ಎಸ್​ಎಲ್​ ತಂಡ ಭೇಟಿ ನೀಡಿ ಫಿಸಿಕಲ್ ಎವಿಡೆನ್ಸ್ ಸಂಗ್ರಹಿಸುತ್ತಿದ್ದೇವೆ ಎಂದರು.

ಕಾರಿನ ವೀಡಿಯೋ ನ್ಯಾಮತಿ ಪೆಟ್ರೋಲ್ ಬಂಕ್​ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ,ಈ ವಿಡಿಯೋ ಪ್ರಕಾರ ಕಾರು 100 ಕಿಲೋ ಮೀಟರ್ ವೇಗದಲ್ಲಿ ಚಾಲನೆಯಲ್ಲಿತ್ತು ಎಂಬುದು ದೃಢವಾಗಿದೆ. ಭಾನುವಾರ(ಅ.30) ರಾತ್ರಿ 11.58ಕ್ಕೆ ಪೆಟ್ರೋಲ್ ಬಂಕ್ ಸಿಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ರಾತ್ರಿ 12.06ಕ್ಕೆ ಚಂದ್ರಶೇಖರ್ ಮೊಬೈಲ್ ಸ್ವಿಚ್ಡ್​ ಆಫ್ ಆಗಿದೆ. ಮೃತದೇಹ ಸಿಕ್ಕ ಜಾಗಕ್ಕೂ ನ್ಯಾಮತಿಗೂ 10 ಕಿಲೋ ಮೀಟರ್ ದೂರವಿದೆ. ಫೋನ್ ಕಾಲ್ , ಸಿಡಿಆರ್ ಎಲ್ಲವೂ ತನಿಖೆ ಗುತ್ತಿದೆ. ನಿನ್ನೆ ರಾತ್ರಿ ಮರಣೋತ್ತರ ಪರೀಕ್ಷೆ ಆಗಿದೆ. ಎರಡ್ಮೂರು ದಿನದಲ್ಲಿ ವರದಿ ಸಿಗಲಿದೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *