ದಾವಣಗೆರೆ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 53 ಚೀಲ ಅಕ್ಕಿ ಹಾಗೂ 200 ಚೀಲ ಮೆಕ್ಕೆಜೋಳವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಓರ್ವ ಆರೊಪಿತನನ್ನು ಬಂಧಿಸಲಾಗಿದೆ.
ಹೊನ್ನಾಳಿ ಸಿಪಿಐ ಸಿದ್ದೇಗೌಡ, ಪಿಎಸ್ಐ ರಮೇಶ್ ಪಿ ಎಸ್ ನೇತೃತ್ವದಲ್ಲಿ ನ್ಯಾಮತಿ ತಾಲ್ಲೂಕು ಮಲ್ಲಿಗೆನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಖರೀದಿ ಮಾಡಿ, ಮೆಕ್ಕೆಜೋಳ ಲಾರಿ ಲೋಡ್ ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕರೊಂದಿಗೆ ದಾಳಿ ಮಾಡಿದ್ದು, ಸುಮಾರು 53 ಚೀಲ ಅಕ್ಕಿ ಹಾಗೂ ಸುಮಾರು 200 ಚೀಲ ಮೆಕ್ಕೆಜೋಳವನ್ನು ವಶಪಡಿಸಿಕೊಂಡಿದ್ದು ಈ ಸಂಬಂಧ ಓರ್ವ ಆರೊಪಿತನನ್ನು ಬಂಧಿಸಿದ್ದಾರೆ.
ಇನ್ನೂ ಗೋದಾಮಿನಲ್ಲಿ ಸುಮಾರು 70 ಚೀಲದಷ್ಟು ದಾಸ್ತಾನು ಮಾಡಲಾಗಿದ್ದ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 123 ಚೀಲ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಸದರಿ ಆರೋಪಿತನ ಮೇಲೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.



