Connect with us

Dvgsuddi Kannada | online news portal | Kannada news online

ದಾವಣಗೆರೆ: ಅಕ್ರಮ ಪಡಿತರ ಅಕ್ಕಿ ವಶ, ಆರೋಪಿ ಬಂಧನ

FB IMG 1665231883872

ದಾವಣಗೆರೆ

ದಾವಣಗೆರೆ: ಅಕ್ರಮ ಪಡಿತರ ಅಕ್ಕಿ ವಶ, ಆರೋಪಿ ಬಂಧನ

ದಾವಣಗೆರೆ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 53 ಚೀಲ ಅಕ್ಕಿ ಹಾಗೂ 200 ಚೀಲ ಮೆಕ್ಕೆಜೋಳವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಓರ್ವ ಆರೊಪಿತನನ್ನು ಬಂಧಿಸಲಾಗಿದೆ.

ಹೊನ್ನಾಳಿ ಸಿಪಿಐ ಸಿದ್ದೇಗೌಡ, ಪಿಎಸ್ಐ ರಮೇಶ್ ಪಿ ಎಸ್ ನೇತೃತ್ವದಲ್ಲಿ ನ್ಯಾಮತಿ ತಾಲ್ಲೂಕು ಮಲ್ಲಿಗೆನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಖರೀದಿ ಮಾಡಿ, ಮೆಕ್ಕೆಜೋಳ ಲಾರಿ ಲೋಡ್ ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕರೊಂದಿಗೆ ದಾಳಿ ಮಾಡಿದ್ದು, ಸುಮಾರು 53 ಚೀಲ ಅಕ್ಕಿ ಹಾಗೂ ಸುಮಾರು 200 ಚೀಲ ಮೆಕ್ಕೆಜೋಳವನ್ನು ವಶಪಡಿಸಿಕೊಂಡಿದ್ದು ಈ ಸಂಬಂಧ ಓರ್ವ ಆರೊಪಿತನನ್ನು ಬಂಧಿಸಿದ್ದಾರೆ.

ಇನ್ನೂ ಗೋದಾಮಿನಲ್ಲಿ ಸುಮಾರು 70 ಚೀಲದಷ್ಟು ದಾಸ್ತಾನು ಮಾಡಲಾಗಿದ್ದ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 123 ಚೀಲ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಸದರಿ ಆರೋಪಿತನ ಮೇಲೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top