ದಾವಣಗೆರೆ: ಜಮೀನಿನಲ್ಲಿದ್ದ 10ಕ್ಕೂ ಹೆಚ್ಚು ಮರಗಳು ದುಷ್ಕರ್ಮಿಗಳು ಕಡಿದುಹಾಕಿದ ಘಟನೆ ತಾಲೂಕಿನ ಗಡಿ ಗುಡಾಳ್ ಗ್ರಾಮದಲ್ಲಿ ನಡೆದಿದೆ.
ಹೇಮಂತಕುಮಾರ್ ಎಂಬವರಿಗೆ ಸೇರಿದ ಜಮೀನಿನಲ್ಲಿ ಅವರ ತಂದೆಯ ಸಮಾಧಿ ಪಕ್ಕದಲ್ಲಿದ್ದ10ಕ್ಕೂ ಹೆಚ್ಚು ಬೇವಿನ ಮರಗಳನ್ನು ಕಡಿದು ಹಾಕಿದ್ದಾರೆ. ಕೃತ್ಯ ಸಂಬಂಧ ಹೇಮಂತಕುಮಾರ್ ಅವರು ಜಯಪ್ಪ ವಿರುದ್ಧ ದಾವಣಗೆರೆ ಗ್ರಾಮಾಂತರ ಠಾಣೆಗೆ ದೂರು ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



