ದಾವಣಗೆರೆ: ಕುಡಿದ ಮತ್ತಿನಲ್ಲಿ ಹಣಕಾಸಿನ ವಿಚಾರಕ್ಕೆ ಇಬ್ಬರು ಯುವತಿಯರ ನಡುವೆ ಜಗಳ ನಡೆದಿದ್ದು, ಬಿಡುಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಜಗಳವಾಡಿದ ಇಬ್ಬರು ಯುವತಿಯರನ್ನು ಬಂಧಿಸಲಾಗಿದೆ.
ಮುಂಬಯಿ ಮೂಲದ ಇಬ್ಬರು ಯುವತಿಯರು, ಹಣಕಾಸಿನ ವಿಚಾರಕ್ಕಾಗಿ ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆ ಮುಂದೆ ಜಗಳ ನಡೆದಿದ್ದು, ಜಗಳ ಬಿಡಿಸಲು ಹೋದ ಕಾನ್ಸ್ಟೆಬಲ್ಗೆ ಗಾಯಗಳಾಗಿವೆ. ಇವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಮುಂಬಯಿಯಿಂದ ಇಬ್ಬರು ಹುಡುಗಿಯರನ್ನು, ಶಿವಮೊಗ್ಗದ ಶಿಕಾರಿಪುರ ಮೂಲದ ವಕೀಲರಾದ ಮಂಜುನಾಥ, ಹರ್ಷ ಎಂಬುವರು ನಗರಕ್ಕೆ ಕರೆಸಿದ್ದರು.
ಯುವತಿಯರಿಗೆ ಹಣ ಕೊಡದ ಹಿನ್ನೆಲೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಯುವತಿಯರು ಠಾಣೆ ಬಳಿ ಮಂಜುನಾಥ, ಹರ್ಷ ಜತೆ ತಡರಾತ್ರಿ ಜಗಳವಾಡಿದ್ದಾರೆ. ಈ ವೇಳೆ ಜಗಳ ನಿಲ್ಲಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರಿಂದ ಒಬ್ಬ ಪೊಲೀಸ್ ಪೇದೆಗೆ ಗಾಯಗಳಾಗಿವೆ. ಪ್ರಕರಣ ಸಂಬಂಧ ಇಬ್ಬರು ಯುವತಿಯರು ಹಾಗೂ ಮಂಜುನಾಥ ಮತ್ತು ಹರ್ಷ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.



