ದಾವಣಗೆರೆ: ನಗರದಲ್ಲಿ ಕುಡಿದ ಮತ್ತಿನಲ್ಲಿ ಯವತಿಯರಿಬ್ಬರ ಗಲಾಟೆಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಹಣಕಾಸಿನ ವಿಚಾರಕ್ಕೆ ನಡೆದ ಜಗಳದಿಂದ ಅಕ್ರಮ ದಂಧೆ ಜಾಲ ಪತ್ತೆಯಾಗಿದೆ.ದಾವಣಗೆರೆಯ ಇಬ್ಬರು ವ್ಯಕ್ತಿಗಳು ಗುಜರಾತಿನಿಂದ ಯುವತಿಯರನ್ನು ಕರೆಸಿ ಜಿಲ್ಲೆಯಲ್ಲಿ ಅಕ್ರಮ ದಂಧೆ ನಡೆಸಲು ತೀರ್ಮಾನಿಸಿದ್ದರು. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.
ದಾವಣಗೆರೆಯ ಯೋಗೀಶ್ ಕುಮಾರ್ ನಾಯ್ಕ್, ಹೇಮರಾಜ್ ಎಂಬುವವರು ನಗರದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲು ತೀರ್ಮಾನಿದ್ದರು. ಇದಕ್ಕಾಗಿ ಈ ಮೊದಲೇ ಯೋಗೀಶ್ ಜೊತೆ ಪೋನ್ ಸಂಪರ್ಕದಲ್ಲಿದ್ದ ಗುಜರಾತ್ ಯುವತಿಯರನ್ನು ದಾವಣಗೆರೆ ಕರೆಸಿದ್ದರು. ಶಿವಮೊಗ್ಗ ಮೂಲದ ಇಬ್ಬರು ವ್ಯಕ್ತಿಗಳೊಂದಿಗೆ ವೇಶ್ಯಾವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಸೂಚಿಸಿದ್ದರು.
ಆದರೆ ಕೊನೆಯ ಕ್ಷಣದಲ್ಲಿ ಆ ಯುವತಿರು ಹಾಗೂ ವೇಶ್ಯಾವಾಟಿಕೆಗೆ ಕರೆಸಿದ್ದವರ ನಡುವೆ ಹಣದ ವಿಚಾರವಾಗಿ ಜಗಳ ಆರಂಭವಾಗಿದೆ. ಆಗ ಯುವತಿಯರು ವೇಶ್ಯಾವಾಟಿಕೆ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಇಬ್ಬರು ಯುವತಿಯರು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಮೂಲದ ಹರೀಶ್ ಮತ್ತು ಮಂಜುನಾಥ ಬಳಿ ಯುವತಿಯರನ್ನು ಕಳುಹಿಸಿದ್ದಾರೆ. ಮುಂಚೆಯೇ ಹಣ ನೀಡುವಂತೆ ಯುವತಿಯರು ಪಟ್ಟು ಹಿಡಿದಿದ್ದಾರೆ. ಮಂಜು ಮತ್ತು ಹರ್ಷ ಆಮೇಲೆ ಹಣ ಕೊಡುವುದಾಗಿ ಹೇಳಿದ್ದಾರೆ. ಇದರಿಂದ ಜಗಳ ಜೋರಾಗಿದೆ. ಕುಡಿದ ಮತ್ತಿನಲ್ಲಿದ್ದ ಇಬ್ಬರು ಯುವತಿಯರು ದಾವಣಗೆರೆಯ ವಿದ್ಯಾನಗರದ ಬಸ್ ನಿಲ್ದಾಣದಲ್ಲಿ ಗಲಾಟೆ ಮಾಡಿದ್ದಾರೆ. ಗಲಾಟೆ ಬಿಡಿಸಲು ಬಂದ ಓರ್ವ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ಗೆ ಗಾಯವಾಗಿದೆ. ಒ್ರಕರಣದಲ್ಲಿ ಇಬ್ಬರು ಯುವತಿಯರು ಹಾಗೂ ಮಂಜುನಾಥ್, ಹರ್ಷ ಬಂಧಿಸಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.



