ದಾವಣಗೆರೆ: ದಾವಣಗೆರೆ ಹೊರ ವಲಯದ ಮನೆಯೊಂದರಲ್ಲಿ ಅಕ್ರಮ ಮದ್ಯ ಮತ್ತು ಪಾಪಿಸ್ಟ್ರಾ ಪೌಡರ್ ಸಂಗ್ರಹಿಸಿದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಬಕಾರಿ ಇಲಾಖೆ ಅಧಿಕಾರಿಗಳು, ಒಬ್ಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನಗರದ ಹೊರ ವಲಯದ ಗ್ರೀನ್ ಪಾಯಿಂಟ್ ಡಾಬಾ ಬಳಿಯ ಮನೆಯೊಂದರ ಮೇಲೆ ದಾಳಿ ಮಾಡಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ 54 ಸಾವಿರ ಮೌಲ್ಯದ ಮದ್ಯ ಹಾಗೂ18 ಕೆಜಿ ಪಾಪಿಸ್ಟ್ರಾ ಪೌಡರ್ ವಶಕ್ಕೆ ಪಡೆಯಲಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ಅವತಾರ್ ಸಿಂಗ್ ಎಂಬ ವ್ಯಕ್ತಿ ಮಾರಾಟ ಮಾಡುತ್ತಿದ್ದ, ಈ ಬಗ್ಗೆ ನಿಖರ ಮಾಹಿತಿ ಮೇರೆಗೆ ದಾಳಿ ನಡೆದಿದೆ. ಅಬಕಾರಿ ಅಯುಕ್ತರ ಮಾರ್ಗದರ್ಶನದಲ್ಲಿ ಅಬಕಾರಿ ಡಿವೈಎಸ್ ಪಿ ರವಿ ಎಂ ಮರಿಗೌಡ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ಬಗ್ಗೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಆರೋಪಿ ಬಂಧಿಸಲಾಗಿದೆ.



