ದಾವಣಗೆರೆ: ನಗರದ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭಗತ್ ಸಿಂಗ್ ನಗರದಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 7.19 ಲಕ್ಷ ರೂಪಾಯಿ ಮೌಲ್ಯದ ಗೃಹ ಬಳಕೆ ವಸ್ತುಗಳನ್ನು ಪ ಪೊಲೀಸರು ಜಪ್ತಿ ಮಾಡಿದ್ದಾರೆ.
ಗೃಹ ಬಳಕೆ ವಸ್ತುವಿನ ಬಾಕ್ಸ್ ಮೇಲೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ , ಅವರ ಪುತ್ರ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭಾವಚಿತ್ರವಿದ್ದು, ಈ ಎಲ್ಲಾ ಬಾಕ್ಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಕಾಡಜ್ಜಿ ಹನಮಂತಪ್ಪ ಎಂಬುವರ ವಿರುದ್ಧ ದೂರು ದಾಖಲಾಗಿದೆ.



