Connect with us

Dvgsuddi Kannada | online news portal | Kannada news online

ದಾವಣಗೆರೆ: ಮತದಾರರಿಗೆ ಅಡುಗೆ ಸಲಕರಣೆ ಹಂಚಿಕೆ ವಿರುದ್ಧ FIR ದಾಖಲು; ಶಾಸಕ ಶಾಮನೂರು ಶಿವಶಂಕರಪ್ಪ A1, ಮಾಜಿ ಸಚಿವ ಮಲ್ಲಿಕಾರ್ಜುನ್ A2 ಆರೋಪಿ

ದಾವಣಗೆರೆ

ದಾವಣಗೆರೆ: ಮತದಾರರಿಗೆ ಅಡುಗೆ ಸಲಕರಣೆ ಹಂಚಿಕೆ ವಿರುದ್ಧ FIR ದಾಖಲು; ಶಾಸಕ ಶಾಮನೂರು ಶಿವಶಂಕರಪ್ಪ A1, ಮಾಜಿ ಸಚಿವ ಮಲ್ಲಿಕಾರ್ಜುನ್ A2 ಆರೋಪಿ

ದಾವಣಗೆರೆ: ಮತದಾರಿಗೆ ಅಡುಗೆ ಸಲಕರಣೆ ಹಂಚಿಕೆ ಪ್ರಕರಣದಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಎ1 ಹಾಗೂ ಪುತ್ರ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಎ2 ಆರೋಪಿಯಾಗಿದ್ದಾರೆ. ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತದಾರಿಗೆ ಹಂಚಲು ಸಂಗ್ರಹಿಸಿದ್ದ ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾಡಜ್ಜಿ ಹನಮಂತಪ್ಪ ಎಂಬುವವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಶಾಮನೂರು ಶಿವಶಂಕರಪ್ಪ, ಪುತ್ರ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಭಾವಚಿತ್ರವಿರುವ ಉಡುಗೊರೆ ಬಾಕ್ಸ್‌ಗಳು ಪತ್ತೆಯಾಗಿದ್ದು, ಪ್ರಕರಣ ಸಂಬಂಧ ತಂದೆ, ಮಗ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂದು ಎಸ್‌ಪಿ ಸಿ.ಬಿ. ರಿಷ್ಯಂತ್‌ ಮಾಹಿತಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಅಕ್ರಮಗಳಿಗೆ ಕಡಿವಾಣ ಹಾಕಲು‌ ಕೇಂದ್ರ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಅಕ್ರಮವಾಗಿ ಅಡುಗೆ ಉಪಕರಣ ಹಂಚಿದ ಆರೋಪದ ಮೇಲೆ ಕೆ.ಟಿ.ಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಗತ್ ಸಿಂಗ್ ನಗರದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ 7.19 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಸಲಕರಣೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top