ದಾವಣಗೆರೆ: ಖಾಸಗಿ ಶಾಲೆಯಲ್ಲಿ ವಂಚನೆ ಆರೋಪ; ಸಿಬಿಎಸ್ ಇ ಅನುಮತಿ ಪಡೆಯದೇ ಮಕ್ಕಳನ್ನು ಸೇರಿಕೊಂಡು ಸ್ಟೇಟ್ ಬೋರ್ಡ್‌ ಪಬ್ಲಿಕ್ ಪರೀಕ್ಷೆ ಬರೆಸಿ ಸಿಕ್ಕಿ ಬಿದ್ದ ಆಡಳಿತ ಮಂಡಳಿ..!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ನಗರದ ಖಾಸಗಿ ಶಾಲೆಯಲ್ಲೊಂದರಲ್ಲಿ ಪೋಷಕರು, ವಿದ್ಯಾರ್ಥಿಗಳಿಗೆ ವಂಚನೆ ಮಾಡಿದ ಆರೋಪ ಕೇಳಿ ಬಂದಿದೆ. ಸಿಬಿಎಸ್ ಇ ಅನುಮತಿ ಪಡೆಯದೇ ಮಕ್ಕಳನ್ನು ಸೇರಿಕೊಂಡು, ಇದೀಗ ಸ್ಟೇಟ್ ಬೋರ್ಡ್‌ ನಡೆಸುವ ಪಬ್ಲಿಕ್ ಪರೀಕ್ಷೆ ಬರೆಸುವಾಗ ಆಡಳಿತ ಮಂಡಳಿಯ ಮಹಾ ಮೋಸ ಬಯಲಾಗಿದೆ.

ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿರುವ ಚೇತನ ಓಲಂಪಿಯಾಡ್ ಶಾಲಾ ಆಡಳಿತ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ‌. ಕಳೆದ 5 ವರ್ಷದಿಂದ ಶಾಲೆ ಆಡಳಿತ ಮಂಡಳಿ, ಸಿಬಿಎಸ್ ಇ ಶುಲ್ಕ ಕಟ್ಟಿಸಿಕೊಂಡು ಈಗ ಸ್ಟೇಟ್ ಸಿಲೆಬಸ್ ಪರೀಕ್ಷೆ ಬರೆಸುತ್ತಿದ್ದಾರೆ ಎಂದು ಶಾಲೆ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಬ್ಲಿಕ್ ಪರೀಕ್ಷೆ ಆದ ಕಾರಣ ವಂಚನೆ ಪ್ರಕರಣ ಬಯಲಿಗೆ ಬಂದಿದೆ. ಸಿಬಿಎಸ್ ಇ ಪರೀಕ್ಷೆ ಬರೆಸದೇ ಸ್ಟೇಟ್ ಸಿಲಬಸ್ ಬರೆಸಿದೆ. 5 ನೇ ತರಗತಿಯ ವಿಶ್ವಚೇತನಾ, ವಿದ್ಯಾ ನಿಕೇತನ ಶಾಲೆಯಲ್ಲಿ ಈ ಅಚಾತುರ್ಯ ನಡೆದಿದೆ. ಮಕ್ಕಳಿಗೆ ಸ್ಟೇಟ್ ಸಿಲಬಸ್ ಪರೀಕ್ಷೆ ಉತ್ತರ ಪತ್ರ ಕೊಟ್ಟು ಬರೆಸಿದ ಆರೋಪ ಕೇಳಿ ಬಂದಿದೆ. ವಿಚಾರ ಗೊತ್ತಾಗುತ್ತಿದ್ದಂತೆ ಆಡಳಿತ ಮಂಡಳಿ ಕಚೇರಿಗೆ ನುಗ್ಗಿದ ಪೋಷಕರು ಕಿಡಿಕಾರಿದರು.

ಈ ಶಾಲೆಯಲ್ಲಿ ಫೀಸ್​ ಕೂಡಾ ಕಡಿಮೆ ಇಲ್ಲಾ. ಎಲ್ಲಾ ರೀತಿಯಲ್ಲೂ ಸೌಲಭ್ಯ ಪಡೆದುಕೊಂಡು ನಂತರ ವಿದ್ಯಾರ್ಥಿಗಳಿಗೆ ಸಲ್ಲಬೇಕಿದ್ದ ನ್ಯಾಯ ಮಾತ್ರ ನೀಡುತ್ತಿಲ್ಲ ಎಂಬುದು ಪೋಷಕರ ವಾದವಾಗಿದೆ. ಒಟ್ಟು 90 ವಿದ್ಯಾರ್ಥಿಗಳು ಶಾಲೆಗೆ ಸೇರಿದ್ದರು. ಸಿಬಿಎಸ್‌ಇ ತರಗತಿಗೆ 55ರಿಂದ 60 ಸಾವಿರ ರೂ. ಶುಲ್ಕ ಪಡೆದಿದ್ದ ಆಡಳಿತ ಮಂಡಳಿ ಇದೀಗ ತಿರುಗಿನಿಂತಿದೆ. ಈ ಶಾಲೆ ಯಾವುದೇ ಸಿಬಿಎಸ್ ಇ ಅನುಮತಿ ಪಡೆದಿಲ್ಲ ಸಿಬಿಎಸ್ ಇ ಇದೆ ಎಂದು ಸುಳ್ಳು ಹೇಳಿ ವಂಚಿಸಿ ಮಕ್ಕಳನ್ನು ದಾಖಲು ಮಾಡಿಕೊಂಡಿದೆ.

ಅಜಾಗರೂಕತೆ, ಮೋಸ, ವಂಚನೆ, ಕಾನೂನು ಬಾಹಿರ ಹಿನ್ನೆಲೆ ಚೇತನಾ ಒಲಂಪಿಯಾಡ್ ಶಾಲೆ ಕಾರ್ಯದರ್ಶಿ ವಿಜಯಲಕ್ಷ್ಮೀ, ಆಡಳಿತಾಧಿಕಾರಿ ಪವನ್, ಪ್ರಾಂಶುಪಾಲ ಶ್ರೀನಿವಾಸ್ ಮೂರ್ತಿ, ಉಪಪ್ರಾಂಶುಪಾಲರಾದ ಮಹಾದೇವಿ, ಮಾನಸ ವಿರುದ್ಧ ದೂರು ದಾಖಲು ಮಾಡಲಾಗಿದೆ. ಕಳೆದ 5 ವರ್ಷಗಳ ಕಾಲ ಕಟ್ಟಿದ್ದ ಶುಲ್ಕ ವಾಪಸ್ ಗೆ ಪೋಷಕರ ಆಗ್ರಹ ವ್ಯಕ್ತವಾಗುತ್ತಿದೆ.

ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೇ ಮೊದಲ ಬಾರಿಗೆ 5 ಹಾಗೂ 8ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲಾಗಿತ್ತು. ಈ ತರಗತಿಗಳ ವಿದ್ಯಾರ್ಥಿಗಳು ರಾಜ್ಯಾದ್ಯಂತ ಒಟ್ಟಿಗೆ ಪರೀಕ್ಷೆ ಬರೆಯುತ್ತಿರುವುದು ಇದೇ ಮೊದಲು. ಇದು ಬೋರ್ಡ್‌ಗಳಿಗೆ ಹೋಲುವ ಪರೀಕ್ಷೆಯಾಗಿದೆ. ಈ ಪರೀಕ್ಷೆಯಲ್ಲಿ ಈ ರೀತಿ ಅನ್ಯಾಯ ಆಗಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *