ದಾವಣಗೆರೆ: ವಾಕ್ ಹೋದ ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ವಾಕ್ ಹೋದ ಮಹಿಳೆಯರು, ವೃದ್ಧೆಯರ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರೇ ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಆರೋಪಿಗಳಿಂದ 7 ಗ್ರಾಂ ಬಂಗಾರದ ಸರ ಕೃತ್ಯಕ್ಕೆ ಬಳಸಿದ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗಿರಿಜಮ್ಮ ತರಳಬಾಳು ಬಡಾವಣೆಯ ಮಕ್ಕಳ ಉದ್ಯಾನವನದ ಪಾರ್ಕ್ ನಲ್ಲಿ ಮೊಮ್ಮಗನ ಜೊತೆ ಮನೆಯ ಕಡೆಗೆ ಬರುತ್ತಿದ್ದು, ಆ ಸಮಯದಲ್ಲಿ ತಮ್ಮ ಹಿಂಬದಿಯಂದ ಬಂದ ವ್ಯಕ್ತಿಗಳು ಗಿರಿಜಮ್ಮ ಕುತ್ತಿಗೆಯ ಹಿಂಭಾಗಕ್ಕೆ ಜೋರಾಗಿ ಗುದ್ದಿ ಅವರ ಕೊರಳಲಿದ್ದ ಬಂಗಾರದ ಸರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. 10 ಗ್ರಾಂ ಬಂಗಾರದ ಸರವನ್ನು ಕಿತ್ತುಕೊಂಡು ಹೋಗಿದ್ದರು. ಆರೋಪಿಗಳು ಗುದ್ದಿದ ರಭಸಕ್ಕೆ ಗಿರಿಜಮ್ಮ ಇವರು ನೆಲಕ್ಕೆ ಬಿದ್ದಿದ್ದು ಬಲಕಾಲಿನ ಮಂಡಿಯ ಬಳಿ ಗಾಯವಾಗಿತ್ತು.

ಗಿರಿಜಮ್ಮ ಜೋರಾಗಿ ಕೂಗಿಕೊಂಡಿದ್ದರಿಂದ ಅಲ್ಲಿದ್ದ ಸಾರ್ವಜನಿಕರುಗಳು, ಆರೋಪಿತರುಗಳನ್ನು ಕಾರ್‌ನಲ್ಲಿ ಬೆನ್ನಟ್ಟಿ ಹಿಡಿದುಕೊಂಡು ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *