ದಾವಣಗೆರೆ: ಆಸ್ತಿ ವಿಚಾರವಾಗಿ ಸಹೋದರಿಬ್ಬರ ಜಗಳ ವಿಕೋಪಕ್ಕೆ ಹೋಗಿದ್ದು, ಅಣ್ಣನನ್ನು ತಮ್ಮನೇ ಚಾಕುನಿಂದ ಚುಚ್ಚಿ ಭೀಕರ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ.
ನಿನ್ನೆ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ (31) ಕೊಲೆಯಾದ ಸಹೋರನಾಗಿದ್ದಾನೆ. ಹರಿಹರದ ಗುಂಡಪ್ಪ ಎಂಬುವರಿಗೆ ಇಬ್ಬರು ಪತ್ನಿಯರಿದ್ದು ನಗರದ ಭರಂಪುರ ನಿವಾಸಿ ಎರಡನೇ ಪತ್ನಿ ರತ್ನಮ್ಮನ ಪುತ್ರ ರಾಜು ಹಾಗೂ ಮೊದಲನೇ ಪತ್ನಿ ಲಕ್ಷಮ್ಮ ಕೊನೆಯ ಮಗನಾದ ಕುಮಾರ್ ನಡುವೆ ಆಸ್ತಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿತ್ತು. ಇದೇ ವಿಚಾರವಾಗಿ ಈ ಭೀಕರ ಕೊಲೆ ನಡೆದಿದೆ.
ಇವರಿಬ್ಬರ ಮಧ್ಯೆ ಪದೇ ಪದೇ ಜಗಳ ನಡೆಯುತ್ತಿದ್ದು, ಭಾನುವಾರ ರಾತ್ರಿ ದಾವಣಗೆರೆಯಿಂದ ಹರಿಹರಕ್ಕೆ ವಾಪಸ್ ಬರುತ್ತಿರುವ ಮಾರ್ಗ ಮಧ್ಯೆ ಕುಮಾರ್ ಮೇಲೆ ತಮ್ಮ ರಾಜು ಮತ್ತು ಮಾರುತಿ ಎಂಬುವವರು ಹಲ್ಲೆ ಮಾಡಿದ್ದಾರೆ. ಕೂಡಲೇ ಕುಮಾರ್ ನನ್ನು ಹರಿಹರ ಆಸ್ಪತ್ರೆಗೆ ಕರೆತರಲಾಗಿತ್ತು. ಮತ್ತೆ ಆಸ್ಪತ್ರೆಯಲ್ಲಿಯೇ ಕುಮಾರ್ ಮೇಲೆ ರಾಜು ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾನೆ. ತೀವ್ರವಾಗಿ ರಕ್ತಸಾವ್ರಗೊಂಡ ಕುಮಾರ್ ಅವರನ್ನು ದಾವಣಗೆರೆಗೆ ಕರೆತರುವಾಗ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.
ಕುಮಾರ್ ಪತ್ನಿ ರೇಖಾ ಹರಿಹರ ಠಾಣೆಯಲ್ಲಿ ದೂರು ನೀಡಿದ್ದು, ರಾಜು ಹಾಗೂ ಮಾರುತಿಯನ್ನು ಪೋಲೀಸರು ಬಂಧಿಸಿದ್ದಾರೆ.ಘಟನಾ ಸ್ಥಳಕ್ಕೆ ದಾವಣಗೆರೆ ಉಪವಿಭಾಗ ಅಧೀಕ್ಷಕರಾದ ಕನ್ನಿಕಾ ಸಕ್ರಿವಾಲ್, ನಗರ ಠಾಣೆ ಇನ್ಸ್ಪೆಕ್ಟರ್ ದೇವಾನಂದ್ ಟಿ, ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.



