ದಾವಣಗೆರೆ: ಕಂಪನಿಗಳಿಗೆ ಬಾಡಿಗೆ ಬಿಡುವುದಾಗಿ ಕಾರು ಪಡೆದು, ಬೇರೆ ಕಡೆ ಒತ್ತೆ ಇಟ್ಟು ಹಣ ಪಡೆಯುತ್ತಿದ್ದ ಆರೋಪಿ ಬಂಧನ; 1.06 ಕೋಟಿ ಮೌಲ್ಯದ 15 ಕಾರು ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕಂಪನಿಗಳಿಗೆ ಬಾಡಿಗೆ ಬಿಡುವುದಾಗಿ ಮಾಲೀಕರಿಂದ ಕಾರು ಪಡೆದು, ಆ ಕಾರಗಳನ್ನು ಬೇರೆಯವರಿಗೆ ಒತ್ತೆ ಇಟ್ಟು ಹಣ ಪಡೆಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 1.06 ಕೋಟಿ ಮೌಲ್ಯದ 15 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣದ ಎ2 ಆರೋಪಿತನನ್ನು ಬಂಧಿಸಿ, ಆರೋಪಿತನಿಂದ ಒಟ್ಟು 1.06 ಕೋಟಿ ರೂ ಮೌಲ್ಯದ 15 ವಿವಿಧ ಕಂಪನಿಯ ಕಾರುಗಳನ್ನು ವಶ ಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾಂತರಾಜ ತನ್ನ ಕೆಎ17-Z-9330 ನಂಬರಿನ ಬಿಳಿ ಬಣ್ಣದ ಸ್ವೀಪ್ಟ್ ಕಾರನ್ನು ಅರ್ಜುನ ಹಾಗೂ ಇತರರು ಕಂಪನಿಗೆ ಬಾಡಿಗೆ ಬಿಡುವ ನೆಪದಲ್ಲಿ ತೆಗೆದುಕೊಂಡು ಹೋಗಿ ಕಾರನ್ನು ಬೇರೆಯವರಿಗೆ ಒತ್ತೆ ಇಟ್ಟು ಹಣ ಪಡೆದಿರುತ್ತಾರೆ‌. ಇದೇ ರೀತಿ 15 ರಿಂದ 20 ಜನರ ಕಾರುಗಳನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿದ್ದಾರೆ.ಈ ಬಗ್ಗೆ ಕೆಟಿಜೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ದಾವಣಗೆರೆ ನಗರ ಉಪವಿಭಾಗದ ಡಿವೈಎಸ್ ಪಿ ನರಸಿಂಹ ತಾಮ್ರದ್ವಜ ಮತ್ತು ಕೆಟಿಜೆ ನಗರ ವೃತ್ತ ನಿರೀಕ್ಷಕ ಹೆಚ್ ಗುರುಬಸವರಾಜ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಭು ಡಿ ಕೆಳಗಿನಮನಿ, ಶ ಅಬ್ದುಲ್ ಖಾದರ್ ಜಿಲಾನಿ ಹಾಗೂ ಸಿಬ್ಬಂದಿಗಳಾದ ಶಂಕರ್ ಜಾಧವ್, ಪ್ರಕಾಶ ಟಿ, ಷಣ್ಮುಖ, ಎಮ್ ಮಂಜಪ್ಪ, ಗಿರೀಶ ಗೌಡ, ರಾಘವೇಂದ್ರ, ಶಾಂತಕುಮಾರ ರವರನ್ನೋಳಗೊಂಡ ತಂಡ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ ಒಟ್ಟು1.06 ಕೋಟಿ ರೂ ಮೌಲ್ಯದ 15 ಕಾರುಗಳನ್ನು ವಶ ಪಡೆಯಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *