ದಾವಣಗೆರೆ: ಆಟೋ – ಬೈಕ್ ನಡುವೆ ಭೀಕರ ಅಪಘಾತವಾಗಿದ್ದು, ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಡಿಸಿಸಿ ಬ್ಯಾಂಕ್ ಅಧಿಕಾರಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ತಡರಾತ್ರಿ ನಡೆದಿದೆ.
ಜಿಲ್ಲೆ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ಸೋಮವಾರ ತಡ ರಾತ್ರಿ ಈ ಘಟನೆ ನಡೆದಿದೆ. ಆಟೋ ರಭಸವಾಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ಡಿಸಿಸಿ ಬ್ಯಾಂಕ್ ಕ್ಷೇತ್ರ ವಿಸ್ತರಣಾಧಿಕಾರಿ ಹಾಲಸ್ವಾಮಿ(53) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತ ದೇಹವನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಹಿಡಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



