Connect with us

Dvgsuddi Kannada | online news portal | Kannada news online

ದಾವಣಗೆರೆ; ಆರ್‌ಟಿಐ ಕಾರ್ಯಕರ್ತನ ಅನುಮಾನಾಸ್ಪದ ಸಾವು ಪ್ರಕರಣ‌; ಕರ್ತವ್ಯಲೋಪ‌ ಹಿನ್ನೆಲೆ ಇಬ್ಬರು ಪೊಲೀಸರ ಅಮಾನತು

ದಾವಣಗೆರೆ

ದಾವಣಗೆರೆ; ಆರ್‌ಟಿಐ ಕಾರ್ಯಕರ್ತನ ಅನುಮಾನಾಸ್ಪದ ಸಾವು ಪ್ರಕರಣ‌; ಕರ್ತವ್ಯಲೋಪ‌ ಹಿನ್ನೆಲೆ ಇಬ್ಬರು ಪೊಲೀಸರ ಅಮಾನತು

ದಾವಣಗೆರೆ: ವಂಚನೆ ಪ್ರಕರಣವೊಂದರಲ್ಲಿ ಪೊಲೀಸರ ವಶದಲ್ಲಿದ್ದ ಆರ್‌ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಗಾಂಧಿನಗರ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಕೃಷ್ಣಪ್ಪ ಹಾಗೂ ಕಾನ್‌ಸ್ಟೆಬಲ್ ದೇವರಾಜ್ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ.ಅರುಣ್ ತಿಳಿಸಿದ್ದಾರೆ.

ನಿವೇಶನಗಳ ನಕಲಿ ದಾಖಲೆ ಸೃಷ್ಠಿಸಿ ತಮ್ಮ ಹೆಸರಿಗೆ ನೋಂದಣಿ ಮಾಡಿದ ಆರೋಪ ಹರೀಶ್ ಮೇಲಿತ್ತು. ಈ ಪ್ರಕರಣದ ವಿಚಾರಣೆ ನಡೆಸಲು ಪೊಲೀಸರು, ಭಾನುವಾರ ತಡರಾತ್ರಿ ಕಾಕನೂರಿನಲ್ಲಿ ವಶಕ್ಕೆ ಪಡೆದು ಕಾರಿನಲ್ಲಿ ದಾವಣಗೆರೆಗೆ ಕರೆದುಕೊಂಡು ಬರುತ್ತಿದ್ದರು. ತೋಳಹುಣಸೆ ಬಳಿ ಬಂದಾಗ ಹರೀಶ್‌ ಅವರು ತಪ್ಪಿಸಿಕೊಂಡು ಮೇಲ್ಸೇತುವೆಯಿಂದ ಹಾರಿ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ತಿಳಿಸಿದ್ದರು. ಆದರೆ, ಮೃತ ಹರೀಶ್ ಪತ್ನಿ ಕೆ.ಆರ್‌. ಲತಾ, ತಮ್ಮ ಪತಿಯನ್ನು ಪೊಲೀಸರೇ ಕೊಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು.

ಈ ಪ್ರಕರಣದಲ್ಲಿ ಕೊಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಬಲವಾದ ಸಾಕ್ಷಿ ಇಲ್ಲದಿರುವುದರಿಂದ ಕರ್ತವ್ಯದಲ್ಲಿದ್ದ ಪೊಲೀಸರನ್ನು ಇನ್ನೂ ಬಂಧಿಸಿಲ್ಲ. ಸದ್ಯಕ್ಕೆ ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದ್ದು, ತನಿಖೆ ಮಾಡಲಾಗುತ್ತಿದೆ.‌ ಸಿಐಡಿ ತನಿಖೆಗೆ ಆದೇಶಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಈಗಾಗಲೇ ಮನವಿ ಮಾಡಲಾಗಿದೆ. ಈ ಬಗ್ಗೆ ಶೀಘ್ರ ಆದೇಶ ಬರಲಿದೆ

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top