ದಾವಣಗೆರೆ: ಬೈಕ್ ನಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯ 1.45 ಲಕ್ಷ ಮೌಲ್ಯದ ಚಿನ್ನದ ಸರ ಕಿತ್ತುಕೊಂಡು ಪರಾರಿ; ಆರೋಪಿ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಬೈಕ್ ನಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯ 1.45 ಲಕ್ಷ ಮೌಲ್ಯದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಚಿನ್ನ, ನಗದು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ನಡೆದಿದೆ.

ಮೇ 28ರಂದು ಸಂಜೆ 4.00 ಗಂಟೆ ಸಮಯದಲ್ಲಿ ಹರಿಹರ ಹಳ್ಳಹಾಪುರ ವಾಸಿ ಕಮಲಮ್ಮ ಅವರನ್ನು 20-25 ವರ್ಷದ ಯುವಕ ಉಕ್ಕಡಗಾತ್ರಿಯಿಂದ ನಿಟುಪ್ಪಳ್ಳಿ
ಬಿಡುವುದಾಗಿ ಹೇಳಿ ಬೈಕಿನಲ್ಲಿ ಕೂರಿಸಿಕೊಂಡಿದ್ದಾನೆ. ಉಕ್ಕಡಗಾತ್ರಿ ನಿಟುಪ್ಪಳ್ಳಿ ರಸ್ತೆಯಲ್ಲಿ ಮೂತ್ರ ವಿಸರ್ಜನೆಗೆಂದು ಬೈಕ್ ನಿಲ್ಲಿಸಿ, ಖಾರದ ಪುಡಿಯನ್ನು ಕಮಲಮ್ಮರವರು ಮುಖಕ್ಕೆ ತಿಕ್ಕಿ, ಭುಜಕ್ಕೆ ಗುದ್ದಿ ಕೊರಳಲ್ಲಿದ್ದ ಸುಮಾರು 34 ಗ್ರಾಂ ತೂಕದ 1,45,000/- ರೂ ಬಾಳುವ ಬಂಗಾರದ ಸರವನ್ನು ಕಿತ್ತುಕೊಂಡು ಹೋಗಿರುತ್ತಾನೆಂದು ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು.

ಈ ಪ್ರಕರಣದ ತನಿಖೆಯನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ.ಬಸರಗಿ, ದಾವಣಗೆರೆ ಜಿಲ್ಲೆ ಹಾಗೂ ದಾವಣಗೆರೆ ಗ್ರಾಮಾಂತರ ಉಪ-ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಕನ್ನಿಕಾ ಸಿಕ್ರಿವಾಲ್ ಮಾರ್ಗದರ್ಶನದಲ್ಲಿ ಹರಿಹರ ವೃತ್ತ
ನಿರೀಕ್ಷಕ ಎಂ.ಐ ಗೌಡಪ್ಪಗೌಡರ ನೇತೃತ್ವದಲ್ಲಿ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ, ಮಧುಚಂದ್ರ @, ಮಧು, ದುಮ್ಮಿ ಮಧು, ಕೋಡಿಯಾಲ್ ಹೊಸಪೇಟೆ, ರಾಣೆಬೆನ್ನೂರು ತಾ|ಈತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪ್ರಕರಣ ಬಯಲಾಗಿದೆ.ಆರೋಪಿ ಕಮಲಮ್ಮರವರ ಕೊರಳಲ್ಲಿದ್ದ ಬಂಗಾರದ ಸರವನ್ನು ಕಿತ್ತುಕೊಂಡು ಹೋಗಿದ್ದು ತಿಳಿದು ಬಂದಿರುತ್ತದೆ.

ಆರೋಪಿತನಿಂದ ಕೃತ್ಯಕ್ಕೆ ಉಪಯೋಗಿಸಿದ್ದ 70,000/-ರೂ. ಬೈಕ್. ಬಂಗಾರದ ಸರವನ್ನು ಸುಲಿಗೆ ಮಾಡಿ ಮಾರಾಟ ಮಾಡಿ ಉಳಿಸಿಕೊಂಡಿದ್ದ 70,200/ರೂ ನಗದು ಹಣ, ಸುಲಿಗೆ ಮಾಡಿಕೊಂಡು ಹೋಗಿದ್ದ, 31.65 ಗ್ರಾಂ ಸುಮಾರು 1,50,000/-ರೂ ಬೆಲೆ ಬಾಳುವ ಬಂಗಾರದ ಘಟ್ಟಿಯನ್ನು ಅಮಾನತ್ತು ಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸುಲಿಗೆ ಪ್ರಕರಣ ತಂಡವು ಭೇಧಿಸಿದ ತಂಡಕ್ಕೆ ಪೊಲೀಸ್ ಅಧೀಕ್ಷ ಡಾ. ಅರುಣ್ ಕೆ ಶ್ಲಾಘಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *