Connect with us

Dvgsuddi Kannada | online news portal | Kannada news online

ದಾವಣಗೆರೆ: ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಕುತ್ತಿಗೆ ಕೊಯ್ದು ಪತ್ನಿಯನ್ನೇ ಹತ್ಯೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ; 11 ಸಾವಿರ ದಂಡ

ದಾವಣಗೆರೆ

ದಾವಣಗೆರೆ: ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಕುತ್ತಿಗೆ ಕೊಯ್ದು ಪತ್ನಿಯನ್ನೇ ಹತ್ಯೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ; 11 ಸಾವಿರ ದಂಡ

ದಾವಣಗೆರೆ: ಕುಡಿಯುವುದಕ್ಕೆ ಹಣ ಕೊಡಲಿಲ್ಲ ಮತ್ತು ಲೈಂಗಿಕ ಕ್ರಿಯೆಗೆ ಸಹಕಾರ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿಗೆ ದಾವಣಗೆರೆಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 11 ಸಾವಿರ ರೂಪಾಯಿ ದಂಡ ವಿಧಿಸಿದೆ.

ಹರಿಹರ ಬಳಿಯ ಅಮರಾವತಿ ಗ್ರಾಮದ ಮರಿಯಪ್ಪ (54) ಜೀವಾವಧಿ ಶಿಕ್ಷೆಗೆ ಒಳಗಾದ ಆರೋಪಿಯಾಗಿದ್ದಾರೆ. 2020ರ ಫೆ. 19 ರಂದು ಅಮರಾವತಿ ಗ್ರಾಮದ ಮಲ್ಲಿಕಾರ್ಜುನ ಬಡಾವಣೆಯಲ್ಲಿ ಆರೋಪಿ ಮರಿಯಪ್ಪ ಹೆಂಡತಿ ಸೌಭಾಗ್ಯಮ್ಮನ ಜೊತೆ ಕುಡಿಯುವದಕ್ಕೆ ಹಣ ಕೊಡಲಿಲ್ಲ ಎಂದು ಜಗಳವಾಡಿದ್ದನು. ನಂತರ ಲೈಂಗಿಕ ಕ್ರಿಯೆಗೆ ಸಹಕಾರ ನೀಡಲಿಲ್ಲ ಎಂಬ ವಿಚಾರಕ್ಕೆ ಬೇಸರದಿಂದ ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದನು.

ಪ್ರಕರಣ ದಾಖಲಿಸಿಕೊಂಡ ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕರಾಗಿದ್ದ ಯು. ಸತೀಶ್ ಕುಮಾರ್ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ದಾವಣಗೆರೆಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ವಿ. ವಿಜಯನಂದ ಆರೋಪಿ ಮರಿಯಪ್ಪನಿಗೆ ಜೀವಾವಧಿ ಶಿಕ್ಷೆ ಹಾಗೂ 11 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಸತೀಶ್ ಸರ್ಕಾರದ ಪರ ವಾದ ಮಂಡಿಸಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top