ದಾವಣಗೆರೆ: ರಾತ್ರಿ ಅರಣ್ಯದಲ್ಲಿ ಗಂಧದ ಮರ ಕಟಾವು; ಆರೋಪಿ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ರಾತ್ರಿ ವೇಳೆ ಅರಣ್ಯದಲ್ಲಿ ಗಂಧದ ಮರ ಕಟಾವು ಮಾಡುತ್ತಿದ್ದ ಆರೋಪಿ ಬಂಧನ ಮಾಡಲಾಗಿದ್ದು, ಆರೋಪಿಯಿಂದ 1 ಲಕ್ಷ ಮೌಲ್ಯದ ಗಂಧದ ಮರ ವಶಕ್ಕೆ ಪಡೆಯಲಾಗಿದೆ.

ಪ್ರಾದೇಶಿಕ ಅರಣ್ಯ ವ್ಯಾಪ್ತಿಯ ದಾವಣಗೆರೆ ವಲಯ ಹೆಬ್ಬಾಳು ಶಾಖೆಯ ಆನಗೋಡು ಗಸ್ತಿನಲ್ಲಿ ಜೂನ್ 26 ರಂದು ಹೆಬ್ಬಾಳು ಶಾಖೆಯ ಸಿಬ್ಬಂದಿಯವರು ರಾತ್ರಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರವನ್ನು ಕಟಾವಣೆ ಮಾಡುತ್ತಿದ್ದ ಆರೋಪಿಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಹೆಚ್ ಜಗನ್ನಾಥ ಹಾಗೂ ತಂಡ ಬಂಧಿಸಿದ್ದಾರೆ.

ಒಬ್ಬ ಆರೋಪಿಯನ್ನು ಬಂಧಿಸಿ ಅಂದಾಜು ರೂ. 1 ಲಕ್ಷ ಮೌಲ್ಯದ 15 ಕೆ.ಜಿ ಶ್ರೀಗಂಧವನ್ನು ಜಪ್ತಿ ಮಾಡಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮತ್ತೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿರುತ್ತದೆ. ನಿಮ್ಮ ಹತ್ತಿರದ ಅರಣ್ಯ ಪ್ರದೇಶಗಳ ಸುತ್ತಮುತ್ತ ವನ್ಯಜೀವಿ, ಅರಣ್ಯ ಸಂಪತ್ತಿಗೆ ಮಾರಕವಾಗುವಂತಹ ಕಾರ್ಯಚಟುವಟಿಕೆಗಳು ಕಂಡುಬಂದಲ್ಲಿ ಇಲಾಖೆ ಉಚಿತ ಸಹಾಯವಾಣಿ 1926ಗೆ ಕರೆ ಮಾಡಲು ಕೋರಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *