Connect with us

Dvgsuddi Kannada | online news portal | Kannada news online

ದಾವಣಗೆರೆ: ಅವಲಕ್ಕಿ ಮಿಲ್‌ ಬೀಗ ಮುರಿದು ನಗದು ಕಳ್ಳತನ; ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಆರೋಪಿಗಳ ಬಂಧನ

images 20

ದಾವಣಗೆರೆ

ದಾವಣಗೆರೆ: ಅವಲಕ್ಕಿ ಮಿಲ್‌ ಬೀಗ ಮುರಿದು ನಗದು ಕಳ್ಳತನ; ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಆರೋಪಿಗಳ ಬಂಧನ

ದಾವಣಗೆರೆ: ಅವಲಕ್ಕಿ  ಮಿಲ್‌ನ ಬೀಗವನ್ನು ಹೊಡೆದು ನಗದು ಕಳ್ಳತನ ಪ್ರಕರಣ ನಡೆದು 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜು.11ರಂದು ರಾತ್ರಿ 12.45ರ ಸುಮಾರಿಗೆ ಮಂಡಕ್ಕಿ ಭಟ್ಟಿ 1ನೇ ಕ್ರಾಸ್ ಬಾಲಾಜಿ ಟಾಕೀಸ್ ಹತ್ತಿರದ ಅನ್ವರ್ ಸಾಬ್ ಸೇರಿದ ಅವಲಕ್ಕಿ ಮಿಲ್‌ನ ಬೀಗವನ್ನು ಹೊಡೆದು ಮಿಲ್‌ನಲ್ಲಿದ್ದ 86,030 ರೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಆಜಾದ್ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿತ್ತು.

ಮೇಲ್ಕಂಡ ಪ್ರಕರಣದ ಪತ್ತೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ . ಬಸರಗಿ, ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ಇಮ್ರಾನ್ ಬೇಗ್ ನೇತೃತ್ವದಲ್ಲಿ ಪಿಎಸ್ ಐ ಪುಷ್ಪಲತಾ ಮತ್ತು ಸಿಬ್ಬಂದಿಗಳಾದ ಮಂಜುನಾಥ ನಾಯ್ಕ, ತಿಪ್ಪೇಸ್ವಾಮಿ ಬಿ, ಕೃಷ್ಣ ಎನ್,ವೆಂಕಟೇಶ, ನಾಗರಾಜ ಡಿ ಬಿ, ಹರೀಶ್ ಎಸ್.ಬಿ ಇವರುಗಳನ್ನು ಒಳಗೊಂಡ ತಂಡವು ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣದ ಆರೋಪಿಗಳಾದ 1) ಖಾದರ್ ಬಾಷ (26), 2) ಮುಭಾರಕ್ (27) ಬಂಧಿಸಲಾಗಿದೆ. ಆರೋಪಿತರಿಂದ ಮೇಲ್ಕಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 86,030 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ., ಐ.ಪಿ.ಎಸ್ ಪ್ರಶಂಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top