ದಾವಣಗೆರೆ: ವಿದ್ಯಾರ್ಥಿನಿಯರಿಗೆ ಚುಡಾಯಿಸುವುದು, ಹಿಂಬಾಲಿಸಿಕೊಂಡು ಹೋಗಿ ಕಿರುಕುಳ ನೀಡುತ್ತಿದ್ದ ಯುವಕನ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ವಿದ್ಯಾರ್ಥಿನಿಯರಿಗೆ ಚುಡಾಯಿಸಿ ಹಿಂಬಾಲಿಸಿಕೊಂಡು ಹೋಗಿ ಅಸಭ್ಯ ವರ್ತನೆ ತೋರಿದಲ್ಲದೆ, ಲೈಂಗಿಕ ಕಿರುಕುಳ ನೀಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಎಂ.ಸಿ.ಸಿ ಬಿ ಬ್ಲಾಕ್ ನಲ್ಲಿ ಜು.5 ರಂದು ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ 4-5 ಬಾರಿ ಬೈಕ್ ನಲ್ಲಿ ಯುವಕ ಹಿಂಬಾಲಿಸಿಕೊಂಡು ಬಂದು, ಆಶ್ಲೀಲ ಪದಗಳಿಂದ ಮಾತನಾಡಿದ್ದ. ಮತ್ತೆ ಜು.16 ರಂದು ಅದೇ ಬೈಕ್ ನಲ್ಲಿ ಬಂದು ಕಿರುಕುಳ ನೀಡಿದ್ದ ಎಂದು ದೂರಿನ ಮೇರೆಗೆ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು.

ಈ ಕೇಸಿನ ಆರೋಪಿಯನ್ನು ಪತ್ತೆ ಮಾಡಲು ತಂಡವನ್ನು ರಚನೆ ಮಾಡಿದ್ದು, ಆರೋಪಿಯ ಪತ್ತೆ ಕಾರ್ಯ ಕೈಗೊಂಡ ಪೊಲೀಸರು ಆರೋಪಿಯ ವಿವರ ಗುರುತಿಸಿ ವಾಹನ ಸಂಖ್ಯೆ ಪತ್ತೆ ಮಾಡಿ ದಿನಾಂಕ 17-07-2023 ರಂದು ಆರೋಪಿ ದಾವಣಗೆರೆ ನಗರ ನಿವಾಸಜ ಖಾದೀರ್ ಖಾನ್ (20) ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ ಬೈಕ್‌ನ್ನು ಅಮಾನತ್ತು ಮಾಡಲಾಗಿದೆ. ಈ ಆರೋಪಿಯು ಹಲವು ದಿನಗಳಿಂದ ಬೇರೆ-ಬೇರೆ ವಿದ್ಯಾರ್ಥಿನಿಯರುಗಳಿಗೆ ಚುಡಾಯಿಸುವುದು, ಬೈಕ್‌ನಲ್ಲಿ ಹಿಂಬದಿಯಿಂದ ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದುದ್ದಾಗಿ ತಿಳಿದು ಬಂದಿರುತ್ತದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *