ದಾವಣಗೆರೆ: ದಾವಣಗೆರೆ ರೈಲ್ವೆ ಠಾಣೆ ಪೊಲೀಸರು ಪ್ರಯಾಣಿಕರ ಬ್ಯಾಗ್ ಕಳ್ಳತನ ಆರೋಪಿಯೊಬ್ಬನನ್ನು ಬಂಧಿಸಿದ್ದು, ಆರೋಪಿಯಿಂದ 2.29 ಲಕ್ಷ ಮೌಲ್ಯದ 41 ಗ್ರಾಂ ಬಂಗಾರದ ಆಭರಣ ಹಾಗೂ 1 ಮೊಬೈಲ್ ವಶಕ್ಕೆ ಪಡೆದಿದ್ದಾರೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ನೀಲಗುಂದ ಗ್ರಾಮದ ಗೋಪಿಕೃಷ್ಣ ಬಂಧಿತನಾಗಿದ್ದಾನೆ. ದಾವಣಗೆರೆ ನಗರದ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಚಲಿಸುವ ರೈಲಿನಲ್ಲೇ 2022ರ ಮಾರ್ಚ್ನಲ್ಲಿ ಬೀದರ್ ಜಿಲ್ಲೆಯ ಹುಮನಾಬಾದ್ ನಿವಾಸಿ ಸಂದೀಪ್ ಅವರಿಗೆ ಸೇರಿದ ಚಿನ್ನಾಭರಣ, ಮೊಬೈಲ್ ಹಾಗೂ 5,000 ನಗದು ಹಣವಿದ್ದ ಬ್ಯಾಗ್ ಕಳ್ಳತನವಾಗಿತ್ತು. ಈ ಬಗ್ಗೆ ಸಂದೀಪ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಜು.18 ರಂದು ರೈಲ್ವೆ ನಿಲ್ದಾಣ ಸಿಬ್ಬಂದಿಯನ್ನು ಕಂಡು ಓಡಲು ಯತ್ನಿಸಿದ್ದ ಆರೋಪಿಯನ್ನು ಹಿಡಿದು ವಿಚಾರಿಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಇನ್ಸ್ಪೆಕ್ಟರ್ ಅಣ್ಣಯ್ಯ ಕೆ.ಟಿ., ಎಎಸ್ಐ ನಾಗರಾಜ್ , ಸಿಬ್ಬಂದಿಗಳಾದ ಶ್ರೀನಿವಾಸ್, ಹರೀಶ್ ನಾಯ್ಕ, ಹಾಲೇಶ್, ಚೇತನ್, ಸುನೀಲ್, ತಿಪ್ಪೇಶ್, ಹನುಮಂತಪ್ಪ ಭಜಂತ್ರಿ, ರಾಜು ಕಾರ್ಯಾಚರಣೆ ಭಾಗಿಯಾಗಿದ್ದರು.



