ದಾವಣಗೆರೆ: ನಗರದ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿತಿಂದ 1.30 ಲಕ್ಷ ಮೌಲ್ಯದ 5 ಬೈಕ್ ವಶಕ್ಕೆ ಪಡೆಯಲಾಗಿದೆ.
ಜು.07 ರಂದು ದಾವಣಗೆರೆ ನಗರದ ರಾಂ ಮಂದಿರ ಪಾರ್ಕ ಬಳಿ ನಿಲ್ಲಿಸಿದ್ದ ಹೊಂಡಾ ಡೀಮ್ ಯುಗಾ ಬೈಕ್ ಕಳ್ಳತನವಾಗಿರುತ್ತದ ಎಂದು ಪವನ್ ಎಂಬುವವರು ಬಡಾವಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಜು.18 ರಂದು ಬೆಳಗ್ಗೆ ಠಾಣೆಯಲ್ಲಿ ದಾಖಲಾದ ಕನ್ನ ಕಳವು, ಸ್ವತ್ತು ಕಳವು ಹಾಗೂ ಬೈಕ್ ಕಳ್ಳತನ ಪ್ರಕರಣಗಳಲ್ಲಿ ಆರೋಪಿ ಮತ್ತು ಮಾಲು ಪತ್ತೆ ಸಂಬಂಧ ವಿಶೇಷ ಗಸ್ತು ಕರ್ತವ್ಯಕ್ಕೆ ನೇಮಕ ಮಾಡಲಾಗಿತ್ತು.
ಠಾಣಾ ಸರಹದ್ದಿನಲ್ಲಿ ಗಸ್ತು ಮಾಡುತ್ತಾ ಬೆಳಗಿನ ಜಾವ ರಿಂಗ್ ರಸ್ತೆಯ ವಿನಾಯಕ ಬಾರ್ ಮುಂಭಾಗದ ರಸೆಯಲ್ಲಿ ಅನುಮಾನಸ್ಪದವಾಗಿ ಸಿಕ್ಕ ವ್ಯಕ್ತಿಯನ್ನು ವಿಚಾರಿಸಿದಾಗ ಸರಿಯಾದ ಉತ್ತರ ಕೊಡದ ಕಾರಣ ಠಾಣೆಗೆ ಕರೆತಂದು ವಿಚಾರಣೆ ಮಾಡಿದ್ದು, ಈ ಆರೋಪಿತ ಶಾಹೀದ್ (21) ದಾವಣಗೆರೆ ನಗರದಲ್ಲಿ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 05 ಬೈಕ್ಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡದ್ದಾನೆ.
ಬೈಕಗಳನ್ನು ಅಮಾನತ್ತುಪಡಿಸಿಕೊಂಡು ಆರೋಪಿಯನ್ನು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ, ದಾವಣಗೆರೆ ನಗರ ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕ ಮಲ್ಲೇಶ್ ದೊಡ್ಡಮನಿ ಮಾರ್ಗದರ್ಶನಲ್ಲಿ ಪೊಲೀಸ್ ನಿರೀಕ್ಷಕ ಧನಂಜಯ ನೇತೃತ್ವದಲ್ಲಿ ಬಡಾವಣೆ ಪೊಲೀಸ್ ಠಾಣೆಯ ಪಿಎಸ್ಐ ಲತಾ ವಿ ತಾಳೆಕರ್ ಸಿಬ್ಬಂದಿಗಳಾದ ಧನಂಜಯ ರಾಜು ಅರಸು ವಿಶ್ವಕುಮಾರ, ಸಿದ್ದೇಶ್, ಅರುಣ ಕುಮಾರ, ಸೈಯದ್ ಅಲಿ, ಹನುಮಂತಪ್ಪ ಭಾಗಿಯಾಗಿದ್ದರು. ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಶ್ಲಾಘಿಸಿದ್ದಾರೆ.



