ದಾವಣಗೆರೆ: ಆಸ್ತಿ ವಿವಾದ ಹಿನ್ನೆಲೆ ಫಲಕ್ಕೆ ಬಂದಿದ್ದ 350 ಅಡಿಕೆ ಮರ ನಾಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಆಸ್ತಿ ವಿವಾದ ಹಿನ್ನೆಲೆ‌ 10 ವರ್ಷದ ಫಲಕ್ಕೆ ಬಂದಿದ್ದ 350 ಅಡಿಕೆ ಮರಗಳನ್ನು ಜೆಸಿಬಿ ಮೂಲಕ ಬುಡ ಸಮೇತ ಕಿತ್ತು ಹಾಕಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.

ಆನಂದ ಎಂಬ ರೈತನ ಅಡಿಕೆ ಮರಗಳು ನಾಶವಾಗಿವೆ. ಈ ಪ್ರಕರಣ ಕುರುತು ಐವರ ವಿರುದ್ಧ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆಸಿಬಿ ಬಳಸಿ ಸುಮಾರ 10 ವರ್ಷದ ಅಡಿಕೆ ಮರಗಳನ್ನು ಸರ್ವನಾಶ ಮಾಡಿದ್ದಾರೆ. ಹಲವು ವರ್ಷಗಳಿಂದ ಅಕ್ಕಪಕ್ಕ ತೋಟದ ರೈತರ ನಡುವೆ ನಡುವೆ ಜಗಳವಿತ್ತು.

ಈ ಘಟನೆ ನನ್ನ ಕಣ್ಣ ಮುಂದೆಯೇ ನಡೆದಿದ್ದು, ಈ ಬಗ್ಗೆ ಪ್ರಶ್ನೆ ಮಾಡಲು ಮುಂದಾದಾಗ ತನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ತೋಟದ ಮಾಲೀಕ ಆನಂದ ಆರೋಪ ಮಾಡಿದ್ದಾರೆ.ಅಡಿಕೆ ತೋಟ ನಮ್ಮ ಅನುಭವದಲ್ಲಿದ್ದು, ಏಕಾಏಕಿ ಆರೋಪಿಗಳು ಜೆಸಿಬಿ ತಂದು, ಅಡಿಕೆ ಮರಗಳ‌ ನಾಶ ಮಾಡಿದ್ದಾರೆ ತೋಟದಲ್ಲಿದ್ದ ಬೋರ್​ವೆಲ್ ಸಹ ಹಾಳು ಮಾಡಿದ್ದಾರೆ. ಪ್ರಕರಣ ಸಂಬಂಧ ರೈತ ಆನಂದ, ಕಣದಮನಿ ಸುರೇಶ ಹಾಗೂ ಜಗದೀಶ ಸೇರಿದಂತೆ ಒಟ್ಟು ಐವರ ವಿರುದ್ಧ ದೂರು ದಾಖಲಿಸಿದ್ದಾರೆ.

ಘಟನೆಯಿಂದ ತನಗೆ ಪ್ರಾಣಭಯವಿದ್ದು, ಪೊಲೀಸರು ರಕ್ಷಣೆ ನೀಡಬೇಕು ತೋಟದ ಮಾಲೀಕ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಮಲೇಬೆನ್ನೂರು ಪೋಲಿಸ್ ಠಾಣೆಯ ಪೋಲಿಸರು, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *