ದಾವಣಗೆರೆ: ಮನೆ ಕಳ್ಳತನ, ಸುಲಿಗೆಕೋರರ ಬಂಧನ; 3.92 ಲಕ್ಷದ ಚಿನ್ನಾಭರಣ ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮನೆ ಕಳ್ಳತನ ಮತ್ತು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 3.92 ಲಕ್ಷ ಮೌಲ್ಯದ ಬಂಗಾರದ ಆಭರಣಗಳು ವಶಕ್ಕೆ ಪಡೆಯಲಾಗಿದೆ.

ದಿನಾಂಕ:25/09/2022 ರಂದು ಹೆಬ್ಬಾಳ ಗ್ರಾಮದ ರುದ್ರಮುನಿ ದಾವಣಗೆರೆ ಗ್ರಾಮಾಂತರ ಠಾಣೆಗೆ ಹಾಜರಾಗಿ, ಯಾರೋ ಕಳ್ಳರು ನಮ್ಮ ಮನೆಯ ಬಾಗಿಲ ಬೀಗ ಮುರಿದು ಗಾಡೇಜ್ ನಲ್ಲಿದ್ದ 2,70,000/- ರೂಮೌಲ್ಯದ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಕಳವು ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದರು.

ಆರೋಪಿತರ ಪತ್ತೆ ಕಾರ್ಯದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕಅರ್.ಬಿ ಬಸರಗಿ ಮತ್ತು
ದಾವಣಗೆರೆ ಗ್ರಾಮಾಂತರ ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕ ಬಸವರಾಜ ಬಿ.ಎಸ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆಯ ಪಿ.ಐ ಲಿಂಗನಗೌಡ ನೆಗಳೂರ , ಪಿಎಸ್‌ಐ ಎ.ಆರ್ ಮುಂದಿನ ಮನಿ ಮತ್ತು ಠಾಣಾ ಸಿಬ್ಬಂದಿಗಳಾದ ದೇವೇಂದ್ರನಾಯ್ಕ, ಅಣ್ಣಯ್ಯ, ಮಹಮ್ಮದ್‌ ಯುಸುಫ್ ಅತ್ತಾರ್, ರಾಜು ಲಮಾಣಿ, ವೀರೇಶ್, ಗಣೇಶನಾಯ್ಕ, ಬಸವರಾಜ ರವರನ್ನೊಳಗೊಂಡ ತಂಡ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳಾದ 01) ಹನುಮಂತಪ್ಪ @ ದೊಡ್ಡಮನಿ ಹನುಮಂತ, 38 ವರ್ಷ, ಹಮಾಲಿ ಕೆಲಸ, ವಾಸ:ಹೆಬ್ಬಾಳು ಗ್ರಾಮ, ದಾವಣಗೆರೆ ತಾಲ್ಲೂಕು, 02) ಹಾಲೇಶಪ್ಪ, 48 ವರ್ಷ, ಟೀ ಅಂಗಡಿ ವ್ಯಾಪಾರ, ವಾಸ: ಮಂಡಲೂರು ಗಾಮ್ರ, ದಾವಣಗೆರೆ ತಾಲ್ಲೂಕು. ಹಾಲಿ ವಾಸ:ಭರಮಸಾಗರ, ಚಿತ್ರದುರ್ಗ ತಾಲ್ಲೂಕು ಇವರುಗಳನ್ನು ವಶಕ್ಕೆ ಪಡೆದು ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣದಲ್ಲಿ ಸುಲಿಗೆಯಾಗಿದ್ದ 86,000/- ರೂ ಬೆಲೆಯ ಬಂಗಾರದ ಆಭರಣಗಳು ಸೇರಿದಂತೆ 02 ಪ್ರಕರಣಗಳಿಂದ ಕಳವು ಮತ್ತು ಸುಲಿಗೆ ಆಗಿದ್ದ 03,06,000/- ರೂ ಬೆಲೆಗೆ ಬಂಗಾರದ ಆಭರಣಗಳನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆರೋಪಿತರನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ. ಅರುಣ್ ಶ್ಲಾಘಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *