Connect with us

Dvgsuddi Kannada | online news portal | Kannada news online

ದಾವಣಗೆರೆ: ದೇವಸ್ಥಾನ ಹುಂಡಿ ಹಣ ಕಳವು; ಒಬ್ಬ ಆರೋಪಿ ಬಂಧನ

IMG 20230814 194006

ದಾವಣಗೆರೆ

ದಾವಣಗೆರೆ: ದೇವಸ್ಥಾನ ಹುಂಡಿ ಹಣ ಕಳವು; ಒಬ್ಬ ಆರೋಪಿ ಬಂಧನ

ದಾವಣಗೆರೆ: ದೇವಸ್ಥಾನ ಹುಂಡಿ ಹಣ ಕಳವು ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ.5ರಂದು ರಾತ್ರಿ ಜಗಳೂರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ (ಕೆ.ಇ.ಬಿವೃತ್ತ) ಶ್ರೀಮಹಾಗಣಪತಿ ದೇವಸ್ಥಾನದ ಹುಂಡಿಯನ್ನು ಯಾರೋ ಕಳ್ಳರು ಹೊಡೆದು, ಸುಮಾರು 30 ಸಾವಿರ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆಂದು ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಆರೋಪಿ ಪತ್ತೆ ಕಾರ್ಯವನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕ‌ ಆರ್.ಬಿ.ಬಸರಗಿ, ಡಿವೈಎಸ್‌ಪಿ ಬಿ.ಎಸ್.ಬಸವರಾಜ ಮಾರ್ಗದರ್ಶನದಲ್ಲಿ ಜಗಳೂರು ಠಾಣೆಯ ಪಿಐ ಶ್ರೀನಿವಾಸರಾವ್ ನೇತೃತ್ವದಲ್ಲಿ ಪಿಎಸ್‌ಐ ಸಾಗರ್ ಹಾಗೂ ಅಪರಾಧ ಪತ್ತೆದಳದ ಸಿಬ್ಬಂದಿ ಒಳಗೊಂಡ ತಂಡವು ಇಂದು (ಆ.14) ಪ್ರಕರಣದ ಆರೋಪಿ ಜಗಳೂರು ವಾಸಿ ಹನುಮಂತ @ ಲಂಕೆ ಹನುಮಂತ (47) ಬಂಧಿಸಲಾಗಿದೆ.

ಆರೋಪಿಯಿಂದ 8,065 ರೂ ನಗದು ಹಣ, ಒಂದು ಕಬ್ಬಿಣದ ರಾಡು ಹಾಗೂ ಒಂದು ಗೋಡೆ ಗಡಿಯಾರವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಈ ಪ್ರಕರಣವನ್ನು ಭೇಧಿಸುವಲ್ಲಿ ಯಶಸ್ವಿಯಾದ ಜಗಳೂರು ಪೊಲೀಸ್‌ ಠಾಣೆ ಸಿಬ್ಬಂದಿಗೆ ಅಧೀಕ್ಷಕ ಡಾ. ಅರುಣ್ ಕೆ. ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top