ದಾವಣಗೆರೆ: ಶಿವಮೊಗ್ಗದಿಂದ ಬಂದು ಹರಿಹರದ ನಂದಿತಾವರೆ ಮನೆಯೊಂದರಲ್ಲಿ ಕಳ್ಳತನ ಮಾಡಿದ ಮೂವರು ಆರೋಪಿಗಳ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಶಿವಮೊಗ್ಗದಿಂದ ಬಂದು ಹರಿಹರದ ನಂದಿತಾವರೆ ಮನೆಯೊಂದರಲ್ಲಿ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಲಿಂದ 38 ಗ್ರಾಂ ತೂಕದ ಸುಮಾರು 1.90,000 ಬೆಲೆ ಬಾಳುವ ಬಂಗಾರದ ಆಭರಣಗಳು, 3,000-ರೂ ಬೆಲೆ ಬಾಳುವ ಬೆಳ್ಳಿಯ ಉಡುದಾರ ಮತ್ತು ಕೃತ್ಯಕ್ಕೆ ಉಪಯೋಗಿಸಿದ 2 ಆಟೋಗಳು, 2 ಮೊಬೈಲ್ ಗಳು ಹಾಗೂ ಕಬ್ಬಿಣದ ರಾಡನ್ನು ಅಮಾನತ್ತು ಪಡಿಸಿಕೊಂಡಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತದೆ.

ಆ.11 ರಂದು ರಾತ್ರಿ ಯಾರೋ ಕಳ್ಳರು ಹರಿಹರ ತಾಲ್ಲೂಕಿನ ನಂದಿತಾವರೆ ಗ್ರಾಮದ ನಾಗಮ್ಮ ‌ಮನೆ ಬೀಗವನ್ನು ಮುರಿದು ಒಳ ಪ್ರವೇಶ ಮಾಡಿ, ಮನೆಯಲ್ಲಿದ್ದ 10,000 ರೂ ನಗದು ಹಣ ಹಾಗೂ 2,16,000 ರೂ. ಬೆಲೆಯ ಬೆಳ್ಳಿ-ಬಂಗಾರದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಈ ಪ್ರಕರಣದ ತನಿಖೆಯನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್.ಬಿ.ಬಸರಗಿ ರವರ ಹಾಗೂ ದಾವಣಗೆರೆ ಗ್ರಾಮಾಂತರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬಸವರಾಜ ಬಿ.ಎಸ್ ಮಾರ್ಗದರ್ಶನದಲ್ಲಿ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ರವರು ಹಾಗೂ ಸಿಬ್ಬಂದಿಗಳನ್ನೋಳಗೊಂಡ ಪೊಲೀಸ್ ತಂಡ ಮೇಲ್ಕಂಡ ಪ್ರಕರಣದ ಆರೋಪಿತರರಾದ 1) ಮಹಮ್ಮದ ಕರೀಂ @ ಕರೀಂ, 22 ವರ್ಷ, ಹಣ್ಣಿನ ವ್ಯಾಪಾರ, ಶಿವಮೊಗ್ಗ 2) ಮಹಮ್ಮದ್ ಶಬಾಜ್ @ ಶಾಬಾ, 21 ವರ್ಷ, ಹಣ್ಣಿನ ವ್ಯಾಪಾರ, ಶಿವಮೊಗ್ಗ 3) ತಬ್ರೇಜ್ ಅಹಮ್ಮದ್, 36 ವರ್ಷ, ಹಣ್ಣಿನ ವ್ಯಾಪಾರ, ಶಿವಮೊಗ್ಗ ಇವರನ್ನು ಬಂಧ‌ನ ಮಾಡಲಾಗಿದೆ.

ಆರೋಪಿತರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 38 ಗ್ರಾಂ ತೂಕದ ಸುಮಾರು 1,90,000 ಬೆಲೆ ಬಾಳುವ ಬಂಗಾರದ ಆಭರಣಗಳು, 3000 ರೂ ಬೆಲೆ ಬಾಳುವ ಬೆಳ್ಳಿಯ ಉಡುದಾರ ಮತ್ತು ಕೃತ್ಯಕ್ಕೆ ಉಪಯೋಗಿಸಿದ 2 ಆಟೋಗಳು, 2 ಮೊಬೈಲ್ ಗಳು ಹಾಗೂ ಕಬ್ಬಿಣದ ರಾಡನ್ನು ಅಮಾನತ್ತು ಪಡಿಸಿಕೊಂಡಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆ ‌ನಡೆಸಿದ ತಂಡಕ್ಕೆ ಎಸ್ಪಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *