Connect with us

Dvgsuddi Kannada | online news portal | Kannada news online

ದಾವಣಗೆರೆ: ಶಿವಮೊಗ್ಗದಿಂದ ಬಂದು ಹರಿಹರದ ನಂದಿತಾವರೆ ಮನೆಯೊಂದರಲ್ಲಿ ಕಳ್ಳತನ ಮಾಡಿದ ಮೂವರು ಆರೋಪಿಗಳ ಬಂಧನ

ದಾವಣಗೆರೆ

ದಾವಣಗೆರೆ: ಶಿವಮೊಗ್ಗದಿಂದ ಬಂದು ಹರಿಹರದ ನಂದಿತಾವರೆ ಮನೆಯೊಂದರಲ್ಲಿ ಕಳ್ಳತನ ಮಾಡಿದ ಮೂವರು ಆರೋಪಿಗಳ ಬಂಧನ

ದಾವಣಗೆರೆ: ಶಿವಮೊಗ್ಗದಿಂದ ಬಂದು ಹರಿಹರದ ನಂದಿತಾವರೆ ಮನೆಯೊಂದರಲ್ಲಿ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಲಿಂದ 38 ಗ್ರಾಂ ತೂಕದ ಸುಮಾರು 1.90,000 ಬೆಲೆ ಬಾಳುವ ಬಂಗಾರದ ಆಭರಣಗಳು, 3,000-ರೂ ಬೆಲೆ ಬಾಳುವ ಬೆಳ್ಳಿಯ ಉಡುದಾರ ಮತ್ತು ಕೃತ್ಯಕ್ಕೆ ಉಪಯೋಗಿಸಿದ 2 ಆಟೋಗಳು, 2 ಮೊಬೈಲ್ ಗಳು ಹಾಗೂ ಕಬ್ಬಿಣದ ರಾಡನ್ನು ಅಮಾನತ್ತು ಪಡಿಸಿಕೊಂಡಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತದೆ.

ಆ.11 ರಂದು ರಾತ್ರಿ ಯಾರೋ ಕಳ್ಳರು ಹರಿಹರ ತಾಲ್ಲೂಕಿನ ನಂದಿತಾವರೆ ಗ್ರಾಮದ ನಾಗಮ್ಮ ‌ಮನೆ ಬೀಗವನ್ನು ಮುರಿದು ಒಳ ಪ್ರವೇಶ ಮಾಡಿ, ಮನೆಯಲ್ಲಿದ್ದ 10,000 ರೂ ನಗದು ಹಣ ಹಾಗೂ 2,16,000 ರೂ. ಬೆಲೆಯ ಬೆಳ್ಳಿ-ಬಂಗಾರದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಈ ಪ್ರಕರಣದ ತನಿಖೆಯನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್.ಬಿ.ಬಸರಗಿ ರವರ ಹಾಗೂ ದಾವಣಗೆರೆ ಗ್ರಾಮಾಂತರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬಸವರಾಜ ಬಿ.ಎಸ್ ಮಾರ್ಗದರ್ಶನದಲ್ಲಿ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ರವರು ಹಾಗೂ ಸಿಬ್ಬಂದಿಗಳನ್ನೋಳಗೊಂಡ ಪೊಲೀಸ್ ತಂಡ ಮೇಲ್ಕಂಡ ಪ್ರಕರಣದ ಆರೋಪಿತರರಾದ 1) ಮಹಮ್ಮದ ಕರೀಂ @ ಕರೀಂ, 22 ವರ್ಷ, ಹಣ್ಣಿನ ವ್ಯಾಪಾರ, ಶಿವಮೊಗ್ಗ 2) ಮಹಮ್ಮದ್ ಶಬಾಜ್ @ ಶಾಬಾ, 21 ವರ್ಷ, ಹಣ್ಣಿನ ವ್ಯಾಪಾರ, ಶಿವಮೊಗ್ಗ 3) ತಬ್ರೇಜ್ ಅಹಮ್ಮದ್, 36 ವರ್ಷ, ಹಣ್ಣಿನ ವ್ಯಾಪಾರ, ಶಿವಮೊಗ್ಗ ಇವರನ್ನು ಬಂಧ‌ನ ಮಾಡಲಾಗಿದೆ.

ಆರೋಪಿತರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 38 ಗ್ರಾಂ ತೂಕದ ಸುಮಾರು 1,90,000 ಬೆಲೆ ಬಾಳುವ ಬಂಗಾರದ ಆಭರಣಗಳು, 3000 ರೂ ಬೆಲೆ ಬಾಳುವ ಬೆಳ್ಳಿಯ ಉಡುದಾರ ಮತ್ತು ಕೃತ್ಯಕ್ಕೆ ಉಪಯೋಗಿಸಿದ 2 ಆಟೋಗಳು, 2 ಮೊಬೈಲ್ ಗಳು ಹಾಗೂ ಕಬ್ಬಿಣದ ರಾಡನ್ನು ಅಮಾನತ್ತು ಪಡಿಸಿಕೊಂಡಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆ ‌ನಡೆಸಿದ ತಂಡಕ್ಕೆ ಎಸ್ಪಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top