ದಾವಣಗೆರೆ: ಅನುಮತಿ ಪಡೆದಿದ್ದಕ್ಕಿಂತ ಹೆಚ್ಚು ಮರಳು ಲೋಡ್ ಮಾಡಿಕೊಂಡು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂದು ಲಾರಿಗೆ 21560, ಮತ್ತೊಂದು ಲಾರಿಗೆ 24640/- ರೂಗಳ ದಂಡ ವಿಧಿಸಿದ್ದಾರೆ.
ದಿನಾಂಕ: 08-09-2023 ರಂದು ರಾಣೆಬೆನ್ನೂರು ತಾಲ್ಲೂಕು ನಾಗೇನಹಳ್ಳಿ & ಮುದೇನೂರು ಮರಳು ಪಾಯಿಂಟ್ ನಿಂದ ಬರುವ ಲಾರಿಗಳಲ್ಲಿ ಮರಳನ್ನು ಅನುಮತಿ ಪಡೆದ ತೂಕಕ್ಕಿಂತ ಹೆಚ್ಚಿನ ತೂಕದ ಮರಳನ್ನು ಹಾಕಿಕೊಂಡು ಬರುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹರಿಹರ ಪೊಲೀಸರು ಲಾರಿಗಳನ್ನು ತಡೆದು ಪರಿಶೀಲಿಸಿದ್ದು, ಅನುಮತಿ ಪಡೆದಿದ್ದಕ್ಕಿಂತ ಹೆಚ್ಚು ಮರಳನ್ನು ತುಂಬಿಕೊಂಡು ಸಾಗಟ ಮಾಡುತ್ತಿರುವುದು ಕಂಡು ಬಂದಿದದೆ. ಈ ವಿಷಯನ್ನು ದಾವಣಗೆರೆ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಹಿರಿಯ ಗಣಿ & ಭೂ ವಿಜ್ಞಾನ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ್ದಾರೆ.
ಇದೇ ರೀತಿ ಮರಳು ಸಾಗಟ ಮಾಡುವವರು ಅನುಮತಿ ಪಡೆದಿದ್ದಕ್ಕಿಂತ ಹೆಚ್ಚು ಮರಳನ್ನು ತುಂಬಿಕೊಂಡು ಸಾಗಟ ಮಾಡುತ್ತಿರುವುದು ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕ ಉಮಾ ಪ್ರಶಾಂತ ತಿಳಿಸಿದ್ದಾರೆ.



