Connect with us

Dvgsuddi Kannada | online news portal | Kannada news online

ದಾವಣಗೆರೆ; ಅಪಘಾತ ಪ್ರಕರಣವೊಂದರ ಪರಿಹಾರ ಬಾಕಿ ಮೊತ್ತ ನೀಡದ ಕೆಎಸ್ ಆರ್ ಟಿಸಿ ಬಸ್ ಜಪ್ತಿ

IMG 20230912 120504

ದಾವಣಗೆರೆ

ದಾವಣಗೆರೆ; ಅಪಘಾತ ಪ್ರಕರಣವೊಂದರ ಪರಿಹಾರ ಬಾಕಿ ಮೊತ್ತ ನೀಡದ ಕೆಎಸ್ ಆರ್ ಟಿಸಿ ಬಸ್ ಜಪ್ತಿ

ದಾವಣಗೆರೆ: ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಕೊಡಬೇಕಿದ್ದ ಪರಿಹಾರದ ಬಾಕಿ ಮೊತ್ತ ಉಳಿಸಿಕೊಂಡಿರುವ ಸಂಸ್ಥೆಯ ಚರಾಸ್ತಿ ಜಪ್ತಿಗೆ ದಾವಣಗೆರೆ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿತ್ತು. ನ್ಯಾಯಾಲಯದ ಆದೇಶದಂತೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಸೋಮವಾರ ಜಪ್ತಿ ಮಾಡಲಾಯಿತು.

ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಹಾವೇರಿ ಡಿಪೋಗೆ ಸೇರಿದ ಎರಡು ಬಸ್‌ಗಳನ್ನು ನ್ಯಾಯಾಂಗ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿದರು. 2013ರಲ್ಲಿ ತುಮಕೂರು ಟೋಲ್ ಬಳಿ ಹಾವೇರಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿಗೆ ತೆರಳುತ್ತಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಸಂಜೀವ್ ಎಂ. ಪಾಟೀಲ್ ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ 2,82,42,885 ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು. ಸಾರಿಗೆ ಸಂಸ್ಥೆ ಈವರೆಗೆ 2.20 ಕೋಟಿ ಮಾತ್ರ ಪಾವತಿಸಿದ್ದು, 2016ರಿಂದ ಬಡ್ಡಿ ಮೊತ್ತ ಸೇರಿ 1 ಕೋಟಿಯಷ್ಟು ಹಣವನ್ನು ಮೃತರ ಕುಟುಂಬಕ್ಕೆ ಕೆಎಸ್‌ಆರ್‌ಟಿಸಿ ನೀಡಬೇಕಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top