Connect with us

Dvgsuddi Kannada | online news portal | Kannada news online

ದಾವಣಗೆರೆ: ಮಟ್ಕಾ ಜೂಜಾಟ ನಡೆಸುತ್ತಿದ್ದವರ ಮೇಲೆ ದಾಳಿ; ಇಬ್ಬರು ಆರೋಪಿಗಳು‌, 62,700 ರೂ. ನಗದು ವಶ

crime sym

ದಾವಣಗೆರೆ

ದಾವಣಗೆರೆ: ಮಟ್ಕಾ ಜೂಜಾಟ ನಡೆಸುತ್ತಿದ್ದವರ ಮೇಲೆ ದಾಳಿ; ಇಬ್ಬರು ಆರೋಪಿಗಳು‌, 62,700 ರೂ. ನಗದು ವಶ

ದಾವಣಗೆರೆ: ಮಟ್ಕಾ ಜೂಜಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, 62,700 ರೂ. ನಗದು ಸಹಿತ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಿಲ್ಲೆಯ ಚನ್ನಗಿರಿ ತಾಲ್ಲೂಕ್ ಚಿರಡೋಣಿ ಗ್ರಾಮದ ಚಿರಡೋಣಿಯಿಂದ ಬಸವಾಪಟ್ಟಣ ಕಡೆಗೆ ಹೋಗುವ ರಸ್ತೆ ಪಕ್ಕದಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಸುತ್ತಿರುವ ಬಗ್ಗೆ ಪೊಲೀಸ್ ಅಧಿಕ್ಷಕರು ದಾವಣಗೆರೆ ರವರಿಗೆ ಮಾಹಿತಿ ಮೆರೆಗೆ ದಾಳಿ ನಡೆದಿದೆ.

ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಸಾದ್ ಪಿ ಮತ್ತು ಸಿಬ್ಬಂದಿಗಳಾದ ಪ್ರಕಾಶ, ನಾಗರಾಜ್, ಗೋವಿಂದರಾಜ್, ಮಲ್ಲಿಕಾರ್ಜುನ ಹಾದಿಮನಿ, ಮುತ್ತುರಾಜ್, ಶೋಭಾ, ಶಶಿಕಲಾ, ಲಿಂಗರಾಜ್‌ ಒಳಗೊಂಡ ತಂಡ ದಾಳಿ ನಡೆದಿದೆ. ದಾಳಿ ವೇಳೆ ಇಬ್ವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 62,700 ರೂ. ನಗದು ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಳಿಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್ ಬಿ ಬಸರಗಿ ಪ್ರಶಂಸಿದ್ದಾರೆ.

ದಾವಣಗೆರೆ: ರೈಲ್ವೆ ಹಳಿ ದಾಟುವಾಗ ಎಡವಿ ಬಿದ್ದ ಶಿಕ್ಷಕ; ದಿಢೀರ್ ಬಂದ ರೈಲು- ಹಳಿ ಮಧ್ಯೆಯೇ ಮಲಗಿ ಪ್ರಾಣ ಉಳಿಸಿಕೊಂಡ ಶಿಕ್ಷಕ…!

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top