ದಾವಣಗೆರೆ; ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದ ಕೆರೆಯ ಹಿಂದೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಪೊಲೀಸ್ ದಾಳಿ ಮಾಡಿದ್ದು, 6,100 ರೂ. ನಗದು ವಶಕ್ಕೆ ಪಡೆಯಲಾಗಿದೆ.
ಉಪಾಧೀಕ್ಷಕ ಬಸವರಾಜ , ಬಿ.ಎಸ್. ದಾವಣಗೆರೆ ಗ್ರಾಮಾಂತರ ಉಪವಿಭಾಗ ಮತ್ತು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ್ ಸಗರಿ ಹರಿಹರ ವೃತ್ತ, ಇವರ ಮಾರ್ಗದರ್ಶನದಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ಪಿ ಎಸ್ ಐ ರವರಾದ ಅರವಿಂದ ಬಿ.ಎಸ್ ಮತ್ತು ಸಿಬ್ಬಂದಿಗಳಾದ ನಾಗರಾಜ್ , ಬಣಕಾರ್ ಶ್ರೀಧರ್, ಗಂಗಾಧರ ಪಿ ಎನ್, ರಮೇಶ್ ಡಿ ಬಿ, ಶ ನವೀನ್ ಕುಮಾರ್, ವೆಂಕಟೇಶ ಅವರನ್ನೊಳಗೊಂಡ ತಂಡ ದಾಳಿ ನಡೆಸಿದೆ. 03 ಜನ ಆರೋಪಿಯಂತರನ್ನು ದಸ್ತಗಿರಿ ಮಾಡಿದ್ದು, ಇಬ್ಬರು ಆರೋಪಿತರು ತಲೆ ಮರೆಸಿಕೊಂಡಿರುತ್ತಾರೆ, ಸಿಕ್ಕ ಆರೋಪಿತರಿಂದ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 6100 /- ರೂ. ನಗದು ಹಣ ಮತ್ತು 52 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದು ಈ ಸಂಬಂಧ ಹರಿಹರ ಗ್ರಾಮಾಂತರ ಠಾಣೆಯಲ್ಲು ಪ್ರಕರಣ ದಾಖಲಾಗಿದೆ.



