ದಾವಣಗೆರೆ: ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ; 34 ಸಾವಿರ ನಗದು ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ ಮಾಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 34,200 ರೂ. ನಗದು ವಶಕ್ಕೆ ಪಡೆಯಲಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ 20-20 ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳಾದ 1) ಇಮ್ತಿಯಾಜ್ ಹಾಗೂ 2)ಇಸ್ಮಾಯಿಲ್ ಜಬಿವುಲ್ಲಾ ಹಿಡಿದು ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 34,200/- ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಆರೋಪಿತರ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್ಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿ ಆರ್ ಬಿ ಘಟಕದ ಪ್ರಭಾರ ಪೊಲೀಸ್ ನಿರೀಕ್ಷಕ ರುದ್ರಪ್ಪ ಎಲ್ ನೇತೃತ್ವದಲ್ಲಿ ಡಿಸಿ ಆರ್ ಬಿ ಘಟಕದ ಸಿಬ್ಬಂದಿಗಳ ತಂಡ ದಾಳಿ ಮಾಡಿದೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಪ್ತಗಿರಿ ಶಾಲೆ ಹತ್ತಿರ, ಕುಂದುವಾಡ ಕೆರೆಗೆ ಹೋಗುವ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *