ದಾವಣಗೆರೆ: ಚಿಕನ್ ಮಾಡಿಲ್ಲವೆಂದು ಜಗಳ ತೆಗೆದು ಚಾಕುವಿನಿಂದ ಇರಿದು ಹೆಂಡತಿಯನ್ನೇ ಕೊಲೆ ಆರೋಪಿಗೆ ದಾವಣಗೆರೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 6 ವರ್ಷ ಕಾರಾಗೃಹ ಮತ್ತು 10.000/- ರೂ ದಂಡ ವಿಧಿಸಿದೆ.
ಹರಿಹರದ ವಾಸನ ಗ್ರಾಮದ ಗುತ್ಯಮ್ಮ ಎಂಬುವರು ದಿನಾಂಕ:08/06/2022 ರಂದು ಠಾಣೆಗೆ ಹಾಜರಾಗಿ ತನ್ನ ಮಗಳಾದ ಶೀಲಾಳ ಗಂಡ ಬನ್ನಿಕೋಡು ಗ್ರಾಮದ ಮಾಗನಹಳ್ಳಿ ಕೆಂಚಪ್ಪ, ಅಂದು ಸಂಜೆ 07-00 ಗಂಟೆ ಸುಮಾರಿಗೆ ಮದ್ಯಪಾನ ಮಾಡಿ ಬಂದು ತನ್ನ ಹೆಂಡತಿ ಶೀಲಾಳನ್ನು ಚಿಕನ್ ಮಾಡಿಲ್ಲವೆಂದು ಜಗಳ ತೆಗೆದು ಚಾಕುವಿನಿಂದ ಎಡಭುಜಕ್ಕೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಹರಿಹರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು
ತನಿಖಾಧಿಕಾರಿ ವೃತ್ತ ನಿರೀಕ್ಷಕ ಸತೀಶ ಯು, ತನಿಖೆ ಪೂರೈಸಿ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜೆ.ವಿ ವಿಜಯಾನಂದ ಅವರು, ಆರೋಪಿ ಕೆಂಚಪ್ಪ ಹೆಂಡತಿ ಕೊಲೆ ಮಾಡಿದ ಆರೋಪ ಸಾಬೀತಾಗಿದ್ದರಿಂದ ಆರೋಪಿತನಿಗೆ 06 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10,000/- ರೂ. ದಂಡ ವಿಧಿಸಿದ್ದಾರೆ.
ಈ ಪ್ರಕರಣದಲ್ಲಿ ದೂರುದಾರರ ಪರವಾಗಿ ಸರ್ಕಾರಿ ವಕೀಲ ಸತೀಶ ಕುಮಾರ್ ನ್ಯಾಯ ಮಂಡನೆ ಮಾಡಿಸಿದ್ದರು. ಈ ಕೊಲೆ ಪ್ರಕರಣದಲ್ಲಿ ತನಿಖೆ ಮಾಡಿ ದೋಷಾರೋಪಣಾ ಪಟ್ಟಿಯನ್ನು
ತಯಾರಿಸಿ ಮಾನ್ಯ ಘನ ನ್ಯಾಯಾಲಯಕ್ಕೆ ಸಲ್ಲಿಸಿದ ಅಧಿಕಾರಿ ಸಿಬ್ಬಂದಿಗಳಗೂ ಹಾಗೂ ನ್ಯಾಯ ಮಂಡನೆ ಮಾಡಿದ ಸರ್ಕಾರಿ ವಕೀಲರ ಕಾರ್ಯವನ್ನು ಎಸ್ಪಿ ಉಮಾ ಪ್ರಶಾಂತ್ ಪ್ರಶಂಸಿಸಿದ್ದಾರೆ.



