ದಾವಣಗೆರೆ: ಲೋಕಾಯುಕ್ತ ದಾಳಿ ಮಾಡುವುದಾಗಿ ನ್ಯಾಮತಿ ತಹಶಿಲ್ದಾರ್ ಗೆ ಅಪರಿಚಿತ ವ್ಯಕ್ತಿ ಕೆರೆ; 2 ಲಕ್ಷಕ್ಕೆ ಬೇಡಿಕೆ..!! ದೂರು ದಾಖಲುದಾವಣಗೆರೆ: ಲೋಕಾಯುಕ್ತ ದಾಳಿ ನಡೆಸುವುದಾಗಿ ಹೆದರಿಸಿ ನ್ಯಾಮತಿ ತಾಲ್ಲೂಕಿನ ತಹಶಿಲ್ದಾರ್ಗೆ 2 ಲಕ್ಷಕ್ಕೆ ಬೇಡಿಕೆ ಇಟ್ಟ ಅಪರಿಚಿತ ವ್ಯಕ್ತಿ ವಿರುದ್ಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ನ್ಯಾಮತಿ ತಹಶಿಲ್ದಾರ್ ಎಚ್.ಬಿ. ಗೋವಿಂದಪ್ಪ ದೂರು ದಾಖಲಿಸಿದ್ದಾರೆ.
ಅಪರಚಿತ ವ್ಯಕ್ತಿಯೊಬ್ಬ ನ್ಯಾಮತಿ ತಹಶಿಲ್ದಾರ್ಗೆ ಕರೆ ಮಾಡಿ, ತಾನು ಲೋಕಾಯುಕ್ತ ಡಿವೈಎಸ್ಪಿ ಎಂದು ಪರಿಚಯಿಸಿಕೊಂಡು, ತಹಶಿಲ್ದಾರರ ವಿವರ ಪಡೆದಿದ್ದಾನೆ. ನಿಮ್ಮ ವಿರುದ್ಧ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ. ಲೋಕಾಯುಕ್ತ ಎಸ್ಪಿ ಮತ್ತು ಅವರ ಸಿಬ್ಬಂದಿ ಈಗಾಗಲೇ ನೀವು ಕೆಲಸ ಮಾಡುತ್ತಿರುವ ಸ್ಥಳ ಮತ್ತು ವಾಸವಿರುವ ಮನೆಯ ಮೇಲೆ ದಾಳಿ ಮಾಡಲು ತಯಾರಿ ಮಾಡಿಕೊಂಡಿದ್ದಾರೆ ಎಂದು ಫೋನಿನಲ್ಲಿ ಹೇಳಿದ್ದಾರೆ.
ನಿಮ್ಮ ಬಗ್ಗೆ ಚೆನ್ನಾಗಿ ವಿಚಾರಿಸಿದ್ದೇನೆ, ನೀವು ಒಳ್ಳೆ ಅಧಿಕಾರಿ. ನಾನೂ ಈ ಲೋಕಾಯುಕ್ತ ದಾಳಿ ಆಗದಂತೆ ನೋಡಿಕೊಳ್ಳುತ್ತೇನೆ. ದಾಳಿ ಆಗದಂತೆ ತಡೆಯಲು ಅನ್ ಲೈನ್ ನಲ್ಲಿ 2 ಲಕ್ಷ ಹಣ ಹಾಕುವಂತೆ ಬೇಡಿಕೆ ಇಟ್ಟಿದ್ದಾನೆ. ಹಣ ಹಾಕದಿದ್ದಾಗ ಜೀವ ಬೆದರಿಕೆ ಹಾಕಿ, ನಿನಗೆ ಏನು ಮಾಡಬೇಕು ಅಂತಾ ನಮಗೆ ಗೊತ್ತಿದೆ ಎಂದು ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ಪ್ರಾಣ ಬೆದರಿಕೆ ಮತ್ತು ಮಾನಸಿಕ ಕಿರುಕುಳ ನೀಡಿರುವ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಹಶಿಲ್ದಾರ್ ಎಚ್.ಬಿ. ಗೋವಿಂದಪ್ಪ ದೂರಿನಲ್ಲಿ ಉಲ್ಲೇಖಿಸಿದ್ದಾರೆ.



