ದಾವಣಗೆರೆ; ಕಿರಾಣಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ; ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ; 10 ಸಾವಿರ ಮೌಲ್ಯದ ಮದ್ಯ ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ಸಿದ್ದಮ್ಮನಹಳ್ಳಿ ಗ್ರಾಮದ ಕಿರಾಣಿ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಮಾಹಿತಿ ಮೆರೆಗೆ ಹರಿಹರ ವಲಯ ಮತ್ತು ದಾವಣಗೆರೆ ವಲಯ ಅಬಕಾರಿ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಸಿದ್ದಮ್ಮನಹಳ್ಳಿ ಗ್ರಾಮದ ಮಂಜುನಾಥ್ ಎಂಬ ವ್ಯಕ್ತಿಯ ಕಿರಾಣಿ ಅಂಗಡಿ ಮೇಲೆ ದಾಳಿ ನಡೆದಿದ್ದು, ದಾಳಿ ವೇಳೆ ರೂ.10,110 ಮೌಲ್ಯದ ಅಕ್ರಮ ಮಾರಾಟದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಅಬಕಾರಿ ಉಪಾಯುಕ್ತರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.

ಒಂದು ಲೀಟರ್ ಸಾಮರ್ಥ್ಯದ 76 ನೀರಿನ ಬಾಟಲಿಗಳಲ್ಲಿ 76 ಲೀಟರ್ ಸೇಂದಿ, ಒರಿಜಿನಲ್ ಚಾಯ್ಸ್ ವಿಸ್ಕಿಯ 90 ಮಿಲಿಯ 48 ಟೆಟ್ರೋಪ್ಯಾಕೇಟ್` ಮತ್ತು 500 ಮಿಲಿಯ ಪವರ್ ಕೂಲ್ 6 ಟಿನ್‍ಗಳನ್ನು ಇಲಾಖಾ ವಶಕ್ಕೆ ಪಡೆಯಲಾಗಿದೆ. ಆರೋಪಿಯಾದ ಮಂಜುನಾಥ್‍ನ್ನು ನೋಟೀಸ್ ನೀಡಿ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತೆ ಸ್ವಪ್ನ ಆರ್.ಎಸ್ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *