ದಾವಣಗೆರೆ: ನಗರದ ಕೆಬಿ ಬಡಾವಣೆಯ ಮನೆಯೊಂದರಲ್ಲಿ ಮನೆ ಬೀಗ ಮುರಿದು 47 ಸಾವಿರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ.
ಕೆಬಿ ಬಡಾವಣೆಯ ನಿವಾಸಿ ನಾಗರಾಜಪ್ಪ ಅವರು ಕುಟುಂಬ ಸಮೇತರಾಗಿ ಸಂಬಂಧಿಕರ ಮನೆಗೆ ಹೋಗಿದ್ದರು. ಈ ವೇಳೆ ಮನೆಗೆ ನುಗ್ಗಿದ ಕಳ್ಳರು ಮನೆಯ ಇಂಟರ್ ಲಾಕ್ ಮುರಿದು ಬೀರುವಿನಲ್ಲಿದ್ದ 47 ,400 ರೂಪಾಯಿ ಮೌಲ್ಯದ ಬೆಳ್ಳಿ, ಚಿನ್ನ ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ. ಈ ಬಗ್ಗೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



