Connect with us

Dvgsuddi Kannada | online news portal | Kannada news online

ದಾವಣಗೆರೆ: ರಾತ್ರೋರಾತ್ರಿ ಫಸಲಿಗೆ ಬಂದಿದ್ದ ಅಡಿಕೆ ಮರ ಕಡಿದು ಹಾಕಿದ ದುಷ್ಕರ್ಮಿಗಳು…!

IMG 20231225 192154

ದಾವಣಗೆರೆ

ದಾವಣಗೆರೆ: ರಾತ್ರೋರಾತ್ರಿ ಫಸಲಿಗೆ ಬಂದಿದ್ದ ಅಡಿಕೆ ಮರ ಕಡಿದು ಹಾಕಿದ ದುಷ್ಕರ್ಮಿಗಳು…!

ದಾವಣಗೆರೆ: ರಾತ್ರೋರಾತ್ರಿ ಫಸಲಿಗೆ ಬಂದಿದ್ದ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಮುಕ್ತೇನಹಳ್ಳಿ ಗ್ರಾಮದಲ್ಲಿ ‌ನಡೆದಿದೆ.

ಗ್ರಾಮದ ಪರಮೇಶ್ವರಪ್ಪ ಎಂಬ ರೈತನ ಅಡಿಕೆ ತೋಟದಲ್ಲಿ ಈ ಕೃತ್ಯ ನಡೆಸಿದ್ದಾರೆ. ಎರಡು ಎಕರೆಯಲ್ಲಿ ಬೆಳೆದಿದ್ದ ಅಡಿಕೆ ಮರಳನ್ನು ಕಡಿದು ಹಾಕಲಾಗಿದೆ. ನಾಲ್ಕು ವರ್ಷಗಳಿಂದ ರೈತ ಕಷ್ಟಪಟ್ಟು ಸಾವಿರಕ್ಕೂ ಹೆಚ್ಚು ಅಡಿಕೆ ಮರ ಬೆಳೆಸಿದ್ದರು. ಇನ್ನೇನು ಫಸಲಿಗೆ ಬರಬೇಕು ಎನ್ನುವಷ್ಟರಲ್ಲಿ ಈ ಕೃತ್ಯ ನಡೆದಿದೆ. ಬೆಳಗ್ಗೆ ಅಡಿಕೆ ತೋಟಕ್ಕೆ ಹೋದಾಗ ಅಡಿಕೆ ಮರ ನಾಶವಾಗಿರುವುದನ್ನು ಕಂಡು ರೈತ ಪರಮೇಶ್ವರಪ್ಪಗೆ ಶಾಕ್ ಆಗಿದೆ. ಜಮೀನಿನ ವ್ಯಾಜ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಸ್ಥಳೀಯರ ಮನವಿ ಮಾಡಿದ್ದು, ಹೊನ್ನಾಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಶಾಸಕ ಡಿ. ಜಿ. ಶಾಂತನಗೌಡ, ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ ಭೇಟಿ ನೀಡಿ ಸಾಂತ್ವನ ಹೇಳಿದರು. ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top