Connect with us

Dvgsuddi Kannada | online news portal | Kannada news online

ದಾವಣಗೆರೆ: ರಾತ್ರೋರಾತ್ರಿ ಫಸಲಿಗೆ ಬಂದಿದ್ದ ಅಡಿಕೆ ಮರ ಕಡಿದು ಹಾಕಿದ ದುಷ್ಕರ್ಮಿಗಳು…!

ದಾವಣಗೆರೆ

ದಾವಣಗೆರೆ: ರಾತ್ರೋರಾತ್ರಿ ಫಸಲಿಗೆ ಬಂದಿದ್ದ ಅಡಿಕೆ ಮರ ಕಡಿದು ಹಾಕಿದ ದುಷ್ಕರ್ಮಿಗಳು…!

ದಾವಣಗೆರೆ: ರಾತ್ರೋರಾತ್ರಿ ಫಸಲಿಗೆ ಬಂದಿದ್ದ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಮುಕ್ತೇನಹಳ್ಳಿ ಗ್ರಾಮದಲ್ಲಿ ‌ನಡೆದಿದೆ.

ಗ್ರಾಮದ ಪರಮೇಶ್ವರಪ್ಪ ಎಂಬ ರೈತನ ಅಡಿಕೆ ತೋಟದಲ್ಲಿ ಈ ಕೃತ್ಯ ನಡೆಸಿದ್ದಾರೆ. ಎರಡು ಎಕರೆಯಲ್ಲಿ ಬೆಳೆದಿದ್ದ ಅಡಿಕೆ ಮರಳನ್ನು ಕಡಿದು ಹಾಕಲಾಗಿದೆ. ನಾಲ್ಕು ವರ್ಷಗಳಿಂದ ರೈತ ಕಷ್ಟಪಟ್ಟು ಸಾವಿರಕ್ಕೂ ಹೆಚ್ಚು ಅಡಿಕೆ ಮರ ಬೆಳೆಸಿದ್ದರು. ಇನ್ನೇನು ಫಸಲಿಗೆ ಬರಬೇಕು ಎನ್ನುವಷ್ಟರಲ್ಲಿ ಈ ಕೃತ್ಯ ನಡೆದಿದೆ. ಬೆಳಗ್ಗೆ ಅಡಿಕೆ ತೋಟಕ್ಕೆ ಹೋದಾಗ ಅಡಿಕೆ ಮರ ನಾಶವಾಗಿರುವುದನ್ನು ಕಂಡು ರೈತ ಪರಮೇಶ್ವರಪ್ಪಗೆ ಶಾಕ್ ಆಗಿದೆ. ಜಮೀನಿನ ವ್ಯಾಜ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಸ್ಥಳೀಯರ ಮನವಿ ಮಾಡಿದ್ದು, ಹೊನ್ನಾಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಶಾಸಕ ಡಿ. ಜಿ. ಶಾಂತನಗೌಡ, ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ ಭೇಟಿ ನೀಡಿ ಸಾಂತ್ವನ ಹೇಳಿದರು. ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top