Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ರೀತಿಸಿ ಮದುವೆಯಾದ ಪ್ರೇಮಿಗಳು; ಯುವಕನ ಪೋಷಕರ ಮೇಲೆ‌ ಮಾರಣಾಂತಿಕ ಹಲ್ಲೆ

IMG 20231231 195043

ದಾವಣಗೆರೆ

ದಾವಣಗೆರೆ: ಪ್ರೀತಿಸಿ ಮದುವೆಯಾದ ಪ್ರೇಮಿಗಳು; ಯುವಕನ ಪೋಷಕರ ಮೇಲೆ‌ ಮಾರಣಾಂತಿಕ ಹಲ್ಲೆ

ದಾವಣಗೆರೆ; ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವಕನ ಪೋಷಕರ ಮೇಲೆ ಯುವತಿಯ ಸಂಬಂಧಿಕರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ಹರಿಹರ ತಾಲೂಕಿನ ಕಮಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕಮಲಾಪುರ ಗ್ರಾಮದ ಯುವಕನ ಪೋಷಕರಾದ ಆರುಂಡಿ ಬಸಪ್ಪ ಹಾಗೂ ಪತ್ನಿ ಮಲ್ಲಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಮಲಾಪುರದ ಸಿದ್ದಾರ್ಥ ಹಾಗು ಸೃಷ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೇಮಿಗಳಿಗೆ ಮದುವೆಯಾಗಲು ಇಬ್ಬರ ಜಾತಿ ಅಡ್ಡಿಯಾಗಿತ್ತು. ಮದುವೆಗೆ ಯುವತಿಯ ಪೋಷಕರು ವಿರೋಧಿಸಿದ್ದರು. ಕಳೆದ 20 ದಿನಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಬಳಿಕ ಸಬ್ ರಿಜಿಸ್ಟರ್ ನಲ್ಲಿ ಆಫೀಸ್ ನಲ್ಲಿ ನೋಂದಣಿ ಮಾಡಿಸಿದ್ದರು.

ಯುವತಿ ಬೇರೆ ಜಾತಿ ಯುವಕನೊಂದಿಗೆ ಮದುವೆಯಾಗಿದ್ದಕ್ಕೆ ಹುಡುಗನ ಮನೆಗೆ ನುಗ್ಗಿದ್ದ ಯುವತಿ ಪೋಷಕರು, ಸಿದ್ಧಾರ್ಥ ತಂದೆ ಆರುಂಡಿ ಬಸಪ್ಪ, ಪತ್ನಿ ಮಲ್ಲಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಜಾತಿ ಬೇರೆ ಬೇರೆ ಎಂಬ ಕಾರಣಕ್ಕೆ ಹಲ್ಲೆ ನಡೆದಿದೆ.ಆರುಂಡಿ ಬಸಪ್ಪನ ಮೈಮೇಲಿನ ಬಟ್ಟೆ ಹರಿದು ಅಮಾನುಷವಾಗಿ ಥಳಿಸಲಾಗಿದೆ. ತೀವ್ರ ಗಾಯಗೊಂಡಿರುವ ಬಸಪ್ಪನಿಗೆ ದಾವಣಗೆರೆ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.‌ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top